23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನಾಚರಣೆ

ಕೊಯ್ಯೂರು : “ಸ್ವಾಸ್ತ್ಯ ಸಮಾಜದ ನಿರ್ಮಾಣದಲ್ಲಿ ಯುವಜನರ ಪಾತ್ರ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಮಾದಕ ದ್ರವ್ಯ ಮತ್ತು ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಪೂರ್ಣ ಸಮಾಜದ ನಿರ್ಮಾಣದಲ್ಲಿ ಕೈ ಜೋಡಿಸಬೇಕೆಂದು ಬೆಳ್ತಂಗಡಿ ಆರಕ್ಷಕ ವೃತ್ತ ನಿರೀಕ್ಷಕ ವಸಂತ ಆಚಾರ್ ವಿದ್ಯಾರ್ಥಿಗಳಿಗೆ ಕರೆನೀಡಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜರುಗಿದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ ಬಾಲಕಿಯರು ಸಮಾಜದಲ್ಲಿ ನಡೆಯುವ ಅನಿಷ್ಠಗಳಿಗೆ ಬಲಿಯಾಗಬಾರದೆಂದು ಕಾಳಜಿಯನ್ನು ವ್ಯಕ್ತಪಡಿಸಿದರು.


ಬೆಳ್ತಂಗಡಿ ಆರಕ್ಷಕ ಠಾಣೆಯ ಉಪನೀರಿಕ್ಷಕರಾದ ಮುರಳೀಧರ ನಾಯಕ್ ಮಾತನಾಡಿ ಮಾದಕ ದ್ರವ್ಯ ಮತ್ತು ಅಕ್ರಮ ಸಾಗಾಟದಲ್ಲಿ ಯುವಜನರನ್ನು ತೊಡಗಿಸಿಕೊಳ್ಳುವ ಹುನ್ನಾರ ನಡೆಯುತ್ತಿದ್ದು ವಿದ್ಯಾರ್ಥಿಗಳು ಜಾಗರೂಕತೆಯಿಂದ ಮುನ್ನಡೆಯಬೇಕು ಹಾಗೂ ನಮ್ಮ ಸಮಾಜ ಈ ವಿಷ ವರ್ತುಲದಲ್ಲಿ ಸಿಲುಕದಂತೆ ಜಾಗೃತಿ ವಹಿಸಬೇಕೆಂದು ಕರೆ ನೀಡಿದರು. ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ಪ್ರಮಾಣವಚನಗೈದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯರಾದ ಮೋಹನ ಗೌಡ ಪ್ರಾಸ್ತವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಕುಮಾರಿ ತೃಪ್ತಿ ಧನ್ಯವಾದವಿತ್ತರು.

Related posts

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!