23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ


ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಹಾಲಿನ ದರ ಏರಿಕೆ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಹೆಚ್ಚಳ ಮಾಡಲು ಜು. 02 ರಂದು ಜಿಲ್ಲಾಮಟ್ಟದ ಬೃಹತ್ ಪ್ರತಿಭಟನೆ ಬೆಳ್ತಂಗಡಿ ಮಿನಿ ವಿಧಾನ ಸೌಧದ ಬಳಿ ನಡೆಯಲಿದೆ.

ಬೆಳ್ತಂಗಡಿ ರೈತ ಮೋರ್ಚಾ ಅಧ್ಯಕ್ಷ ವಿಜಯ ಗೌಡ ರವರ ನೇತೃತ್ವದಲ್ಲಿ ಹಾಲಿನ ದರ ಹೆಚ್ಚಳ ಖಂಡಿಸಿ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಏರಿಕೆ ಯಾಗುವ ಬಗ್ಗೆ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ಜೂ.29 ರಂದು ಪಕ್ಷದ ಕಚೇರಿಯಲ್ಲಿ ವಿಶೇಷ ಬೈಠಕ್ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರು ಗಣೇಶ್ ಗೌಡ ನಾವೂರು ಮಾರ್ಗದರ್ಶನ ನೀಡಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಹಾಗೂ ಬೆಳ್ತಂಗಡಿ ಮಂಡಲ ರೈತಮೋರ್ಚಾ ಅಧ್ಯಕ್ಷ ವಿಜಯ ಗೌಡ ವೇಣೂರು , ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಗೌಡ ಆಳಂಬಿಲ ಕೊಕ್ಕಡ, ದಿವಿನೇಶ್ ಚಾರ್ಮಾಡಿ ಹಾಗೂ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದರು.

Related posts

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya
error: Content is protected !!