25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

ಧರ್ಮಸ್ಥಳ. ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನಾ ಕಾರ್ಯಕ್ರಮವು ಇತ್ತೀಚೆಗೆ ಅಮೃತವರ್ಷಿಣಿ ಸಭಾಂಗಣದಲ್ಲಿ ಜರಗಿತು.


ಮುಖ್ಯ ಅತಿಥಿಯಾಗಿ ಎಸ್ ಡಿ ಯಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ಧನ್ಯ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಇವರು ಪಠ್ಯದ ಜೊತೆಗೆ ಪೂರಕವಾದ ಇತರ ಚಟುವಟಿಕೆಗಳಿಗೂ ಹೆಚ್ಚಿನ ಗಮನ ಕೊಡಬೇಕು. ಇದು ಊಟದ ಜೊತೆ ಉಪ್ಪಿನಕಾಯಿ ಇದ್ದoತೆ. ವಿದ್ಯಾರ್ಥಿಗಳು ಸಿಕ್ಕಿದ್ದನ್ನು ಹೆಕ್ಕಿ ತಿನ್ನುವ ಪಕ್ಷಿಗಳಾಬೇಕು. ಓದುವ ಹವ್ಯಾಸವನ್ನು ಹೆಚ್ಚು ಬೆಳೆಸಿಕೊಂಡು ಜ್ಞಾನವನ್ನು ಬೆಳೆಸಿಕೊಳ್ಳಬೇಕು ಎಂದರು.
ಶಾಲಾ ಮುಖ್ಯ ಶಿಕ್ಷಕ ಕಮಲ್ ತೇಜು ರಜಪೂತ ಕಾರ್ಯಕ್ರಮಕ್ಕೆ ಶುಭ ಕೋರಿದರು. ಯಕ್ಷಗಾನ ತರಬೇತಿದಾರ ಲಕ್ಷ್ಮಣ ಗೌಡ ಬೆಳಾಲು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕ ಶೇಖರ್ ಗೌಡ ಸ್ವಾಗತಿಸಿ, ಶಿಕ್ಷಕಿ ಸೀಮಾ ವಂದಿಸಿದರು. ಶಿಕ್ಷಕಿ ಶ್ರೀಜಾ ನಿರೂಪಿಸಿದರು. ಎಲ್ಲಾ ಶಿಕ್ಷಕರು ಸಹಕರಿಸಿದರು.

Related posts

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya
error: Content is protected !!