25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

ಕಣಿಯೂರು: ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆ ಮಾಡುವ ಸಲುವಾಗಿ ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ 36 ವರ್ಷದ ಮಹಿಳೆಯನ್ನು ಸಾಕು ನಾಯಿ ಕಾಪಾಡಿದ ಘಟನೆ ಜೂ.27 ರಂದು ರಾತ್ರಿ ನಡೆದಿದೆ.

ಬೆಂಗಳೂರು ಮೂಲದ ಈ ಮಹಿಳೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಕಣಿಯೂರು ಗ್ರಾಮದ ಪಿಲಿಗೂಡಿನ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಪತಿಗೆ ದೊರಕಿದ ಪಿತ್ರಾರ್ಜಿತ ಆಸ್ತಿಯಲ್ಲಿ ವರ್ಷದ ಹಿಂದೆ ಮನೆ ಕಟ್ಟಿಕೊಂಡು ಇಬ್ಬರು ಮಕ್ಕಳೊಂದಿಗೆ ಸ್ವಾಭಿಮಾನದ ಜೀವನ ನಡೆಸುತ್ತಿದ್ದರು. ಅದುವರೆಗೆ 15 ವರ್ಷ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಕೆಲವು ದಿನಗಳಿಂದ ಮೆಕಾನಿಕ್ ವೃತ್ತಿಯ ಪತಿ ಮತ್ತು ಪತ್ನಿ ನಡುವೆ ಮನಸ್ತಾಪ ಮೂಡಿತ್ತು. ಜೂ.27ರಂದು ನೊಂದುಕೊಂಡ ಮಹಿಳೆ ಜೀವ ತ್ಯಜಿಸುವ ನಿರ್ಧಾರ ಮಾಡಿ ನೇತ್ರಾವತಿ ಸೇತುವೆಗೆ ತೆರಳಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಸಾಕುನಾಯಿ ಅಪಾಯವನ್ನು ಅರಿತು ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು, ಬೊಗಳುತ್ತಾ ರಸ್ತೆಯಲ್ಲಿ ಹೋಗುತ್ತಿರುವವರ ಗಮನ ಸೆಳೆಯುವ ಪ್ರಯತ್ನ ನಡೆಸುತ್ತಿತ್ತು. ಇದೇ ವೇಳೆ ಬೈಕ್‌ನಲ್ಲಿ ಬಂದ ವ್ಯಕ್ತಿಯೋರ್ವರು ಇದನ್ನು ಕಂಡು ಪರಿಚಯದ ಸಮಾಜ ಸೇವಕರೋರ್ವರ ಮೂಲಕ ಇನ್ನೇನು ನದಿಗೆ ಹಾರುವಂತಿದ್ದ ಮಹಿಳೆಯನ್ನು ರಕ್ಷಿಸಿದ ಘಟನೆ ಜೂ.27 ರಂದು ರಾತ್ರಿ ಸಂಭವಿಸಿದೆ. ಒಟ್ಟಾರೆ ಮೂಕಪ್ರಾಣಿಯಾದ ನಾಯಿಯ ತುಡಿತ ಮತ್ತು ಪ್ರಯತ್ನ ಮಹಿಳೆಯನ್ನು ರಕ್ಷಿಸಲು ನೆರವಾದಂತಾಗಿದೆ.

ಮನೆಗೆ ಹೋಗಲಾರೆ ಎಂದು ಪಟ್ಟು: ಜೂ.28 ರಂದು ದಿನವಿಡೀ ರಾಜೀ ಮಾತುಕತೆ ನಡೆಯಿತಾದರೂ ಮಹಿಳೆ ಗಂಡನ ಮನೆಗೆ ಹೋಗಲು ನಿರಾಕರಿಸಿದರು. ಪೊಲೀಸರು ಮತ್ತು ಸ್ಥಳೀಯ ಮನವೊಲಿಕೆಗೆ ಸಾಕಷ್ಟು ಪ್ರಯತ್ನಿಸಿದರೂ ಯಶಸ್ಸು ಸಿಗಲಿಲ್ಲ. ಪ್ರಸ್ತುತ ಅವರು ಟೈಲರಿಂಗ್ ಕಲಿಯುತ್ತಿದ್ದ ಗೆಳತಿಯ ಮನೆಯಲ್ಲಿದ್ದು, ಶನಿವಾರ ಬೆಂಗಳೂರಿನ ತಾಯಿ ಮನೆಯಿಂದ ಕರೆದೊಯ್ಯಲು ಬರುವುದಾಗಿ ತಿಳಿದುಬಂದಿದೆ. ಇಬ್ಬರು ಮಕ್ಕಳು ಅಪ್ಪನೊಂದಿಗೆ ಇರುವುದಾಗಿ ತಿಳಿಸಿರುವರು.

Related posts

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ತಾಲೂಕಿನ ಹಲವು ಕಡೆ ಯೋಗ ದಿನಾಚರಣೆ ಅಂಗವಾಗಿ ಏಕಕಾಲಕ್ಕೆ 20 ತರಬೇತಿ ಕಾರ್ಯಕ್ರಮಗಳು

Suddi Udaya

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya
error: Content is protected !!