September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

ಕಣಿಯೂರು: ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆ ಮಾಡುವ ಸಲುವಾಗಿ ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ 36 ವರ್ಷದ ಮಹಿಳೆಯನ್ನು ಸಾಕು ನಾಯಿ ಕಾಪಾಡಿದ ಘಟನೆ ಜೂ.27 ರಂದು ರಾತ್ರಿ ನಡೆದಿದೆ.

ಬೆಂಗಳೂರು ಮೂಲದ ಈ ಮಹಿಳೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಕಣಿಯೂರು ಗ್ರಾಮದ ಪಿಲಿಗೂಡಿನ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಪತಿಗೆ ದೊರಕಿದ ಪಿತ್ರಾರ್ಜಿತ ಆಸ್ತಿಯಲ್ಲಿ ವರ್ಷದ ಹಿಂದೆ ಮನೆ ಕಟ್ಟಿಕೊಂಡು ಇಬ್ಬರು ಮಕ್ಕಳೊಂದಿಗೆ ಸ್ವಾಭಿಮಾನದ ಜೀವನ ನಡೆಸುತ್ತಿದ್ದರು. ಅದುವರೆಗೆ 15 ವರ್ಷ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಕೆಲವು ದಿನಗಳಿಂದ ಮೆಕಾನಿಕ್ ವೃತ್ತಿಯ ಪತಿ ಮತ್ತು ಪತ್ನಿ ನಡುವೆ ಮನಸ್ತಾಪ ಮೂಡಿತ್ತು. ಜೂ.27ರಂದು ನೊಂದುಕೊಂಡ ಮಹಿಳೆ ಜೀವ ತ್ಯಜಿಸುವ ನಿರ್ಧಾರ ಮಾಡಿ ನೇತ್ರಾವತಿ ಸೇತುವೆಗೆ ತೆರಳಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಸಾಕುನಾಯಿ ಅಪಾಯವನ್ನು ಅರಿತು ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು, ಬೊಗಳುತ್ತಾ ರಸ್ತೆಯಲ್ಲಿ ಹೋಗುತ್ತಿರುವವರ ಗಮನ ಸೆಳೆಯುವ ಪ್ರಯತ್ನ ನಡೆಸುತ್ತಿತ್ತು. ಇದೇ ವೇಳೆ ಬೈಕ್‌ನಲ್ಲಿ ಬಂದ ವ್ಯಕ್ತಿಯೋರ್ವರು ಇದನ್ನು ಕಂಡು ಪರಿಚಯದ ಸಮಾಜ ಸೇವಕರೋರ್ವರ ಮೂಲಕ ಇನ್ನೇನು ನದಿಗೆ ಹಾರುವಂತಿದ್ದ ಮಹಿಳೆಯನ್ನು ರಕ್ಷಿಸಿದ ಘಟನೆ ಜೂ.27 ರಂದು ರಾತ್ರಿ ಸಂಭವಿಸಿದೆ. ಒಟ್ಟಾರೆ ಮೂಕಪ್ರಾಣಿಯಾದ ನಾಯಿಯ ತುಡಿತ ಮತ್ತು ಪ್ರಯತ್ನ ಮಹಿಳೆಯನ್ನು ರಕ್ಷಿಸಲು ನೆರವಾದಂತಾಗಿದೆ.

ಮನೆಗೆ ಹೋಗಲಾರೆ ಎಂದು ಪಟ್ಟು: ಜೂ.28 ರಂದು ದಿನವಿಡೀ ರಾಜೀ ಮಾತುಕತೆ ನಡೆಯಿತಾದರೂ ಮಹಿಳೆ ಗಂಡನ ಮನೆಗೆ ಹೋಗಲು ನಿರಾಕರಿಸಿದರು. ಪೊಲೀಸರು ಮತ್ತು ಸ್ಥಳೀಯ ಮನವೊಲಿಕೆಗೆ ಸಾಕಷ್ಟು ಪ್ರಯತ್ನಿಸಿದರೂ ಯಶಸ್ಸು ಸಿಗಲಿಲ್ಲ. ಪ್ರಸ್ತುತ ಅವರು ಟೈಲರಿಂಗ್ ಕಲಿಯುತ್ತಿದ್ದ ಗೆಳತಿಯ ಮನೆಯಲ್ಲಿದ್ದು, ಶನಿವಾರ ಬೆಂಗಳೂರಿನ ತಾಯಿ ಮನೆಯಿಂದ ಕರೆದೊಯ್ಯಲು ಬರುವುದಾಗಿ ತಿಳಿದುಬಂದಿದೆ. ಇಬ್ಬರು ಮಕ್ಕಳು ಅಪ್ಪನೊಂದಿಗೆ ಇರುವುದಾಗಿ ತಿಳಿಸಿರುವರು.

Related posts

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಬಜಿರೆ: ಶ್ಯಾಮ ಹೆಗ್ಡೆ ಪೊಂಗರ್ತ್ಯಾರ್ ನಿಧನ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya
error: Content is protected !!