22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

ನಿಡ್ಲೆ: ಇಲ್ಲಿಯ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭವು ಜೂ.29 ರಂದು ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ಯಾಮಲ ವಹಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ , ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ರಮೇಶ್ ರಾವ್ ಕೊಡಂಗೆ, ನಿಡ್ಲೆ ಗ್ರಾ.ಪಂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್, ಗಣೇಶ್ ಹೆಬ್ಬಾರ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ, ಗ್ರಾ.ಪಂ. ಸದಸ್ಯರಾದ ಶೈಲಜಾ, ಹೇಮಾವತಿ, ಗಣೇಶ್ ಸ್ಟೋರ್‍ಸ್ ಮಾಲಕ ಪುರಂದರ ಗೌಡ, ನಿಸರ್ಗ ಯುವಜನೇತರ ಯುವಕ ಸಂಘದ ಅಧ್ಯಕ್ಷ ಪುನೀತ್ ಕುಮಾರ್, ಜ್ಯೋತಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಂಜನ್ ಅಠವಳೆ, ಸಂಪನ್ಮೂಲ ವ್ಯಕ್ತಿ ಪ್ರತಿಭಾ, ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ರಾವ್, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಮಾಧವ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ ಸದಸ್ಯರು, ಅಧ್ಯಾಪಕರು, ಅಕ್ಷರದಾಸೋಹದ ಸಿಬ್ಬಂದಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಪ್ರಸ್ತಾವಿಕ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕ ಗೋಪಾಲ್ ಸ್ವಾಗತಿಸಿದರು, ಶಿಕ್ಷಕ ಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

Related posts

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

Suddi Udaya

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya
error: Content is protected !!