25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

ನಿಡ್ಲೆ: ಇಲ್ಲಿಯ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭವು ಜೂ.29 ರಂದು ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ಯಾಮಲ ವಹಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ , ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ರಮೇಶ್ ರಾವ್ ಕೊಡಂಗೆ, ನಿಡ್ಲೆ ಗ್ರಾ.ಪಂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್, ಗಣೇಶ್ ಹೆಬ್ಬಾರ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ, ಗ್ರಾ.ಪಂ. ಸದಸ್ಯರಾದ ಶೈಲಜಾ, ಹೇಮಾವತಿ, ಗಣೇಶ್ ಸ್ಟೋರ್‍ಸ್ ಮಾಲಕ ಪುರಂದರ ಗೌಡ, ನಿಸರ್ಗ ಯುವಜನೇತರ ಯುವಕ ಸಂಘದ ಅಧ್ಯಕ್ಷ ಪುನೀತ್ ಕುಮಾರ್, ಜ್ಯೋತಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಂಜನ್ ಅಠವಳೆ, ಸಂಪನ್ಮೂಲ ವ್ಯಕ್ತಿ ಪ್ರತಿಭಾ, ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ರಾವ್, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಮಾಧವ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ ಸದಸ್ಯರು, ಅಧ್ಯಾಪಕರು, ಅಕ್ಷರದಾಸೋಹದ ಸಿಬ್ಬಂದಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಪ್ರಸ್ತಾವಿಕ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕ ಗೋಪಾಲ್ ಸ್ವಾಗತಿಸಿದರು, ಶಿಕ್ಷಕ ಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

Related posts

ಕಳೆಂಜದಲ್ಲಿ ಲೋಲಾಕ್ಷರ ಮನೆ ಪಂಚಾಂಗ ಕಿತ್ತೆಸೆದ ಅರಣ್ಯ ಇಲಾಖೆ:ಬಡವನ ಮೇಲೆ ಅರಣ್ಯಧಿಕಾರಿಗಳ ದೌರ್ಜನ್ಯದ ವಿರುದ್ಧ ತಿರುಗಿ ಬಿದ್ದ ಶಾಸಕರು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya
error: Content is protected !!