September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

ನಿಡ್ಲೆ: ಇಲ್ಲಿಯ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭವು ಜೂ.29 ರಂದು ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ಯಾಮಲ ವಹಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ , ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ರಮೇಶ್ ರಾವ್ ಕೊಡಂಗೆ, ನಿಡ್ಲೆ ಗ್ರಾ.ಪಂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್, ಗಣೇಶ್ ಹೆಬ್ಬಾರ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ, ಗ್ರಾ.ಪಂ. ಸದಸ್ಯರಾದ ಶೈಲಜಾ, ಹೇಮಾವತಿ, ಗಣೇಶ್ ಸ್ಟೋರ್‍ಸ್ ಮಾಲಕ ಪುರಂದರ ಗೌಡ, ನಿಸರ್ಗ ಯುವಜನೇತರ ಯುವಕ ಸಂಘದ ಅಧ್ಯಕ್ಷ ಪುನೀತ್ ಕುಮಾರ್, ಜ್ಯೋತಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಂಜನ್ ಅಠವಳೆ, ಸಂಪನ್ಮೂಲ ವ್ಯಕ್ತಿ ಪ್ರತಿಭಾ, ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ರಾವ್, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಮಾಧವ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ ಸದಸ್ಯರು, ಅಧ್ಯಾಪಕರು, ಅಕ್ಷರದಾಸೋಹದ ಸಿಬ್ಬಂದಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಪ್ರಸ್ತಾವಿಕ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕ ಗೋಪಾಲ್ ಸ್ವಾಗತಿಸಿದರು, ಶಿಕ್ಷಕ ಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya
error: Content is protected !!