July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

ನಾರಾವಿ: ರಸ್ತೆಯಲ್ಲಿ ನಾಯಿಯೊಂದು ಬೈಕ್‌ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವಿಗೀಡಾದ ಘಟನೆ ಹೊಸ್ಮಾರು ಬಳಿ ಜೂ.28 ರಂದು ಸಂಭವಿಸಿದೆ.

ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ (26ವ) ಎಂಬವರೇ ಮೃತಪಟ್ಟ ಮಹಿಳೆ. ಕಾರ್ಕಳ-ಗುರುವಾಯನಕೆರೆ ರಸ್ತೆಯ ಹೊಸ್ಮಾರು ಸೇತುವೆ ಬಳಿ ಜೂ.28ರ ಸಂಜೆ ಗಂಡನೊಂದಿಗೆ ಬೈಕ್‌ನಲ್ಲಿ ಸಾಗುತ್ತಿದ್ದಾಗ ನಾಯಿ ದಿಢೀರನೆ ಅಡ್ಡ ಬಂದ ಪರಿಣಾಮ ಬೈಕ್ ರಸ್ತೆಗೆಸೆಯಲ್ಪಟ್ಟಿತ್ತು.

ಘಟನೆಯಿಂದ ನೀಕ್ಷಾ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಸ್ವರೂಪದ ಗಾಯವಾಗಿದ್ದು, ಆಸ್ಪತ್ರೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು. ನೀಕ್ಷಾ ಅವರಿಗೆ ಎರಡು ತಿಂಗಳ ಹಿಂದೆಯಷ್ಟೇ ಮದುವೆ ಆಗಿತ್ತು ಎಂದು ತಿಳಿದು ಬಂದಿದೆ.

Related posts

ಉಜಿರೆ ಎಸ್.ಡಿ.ಎಂ ರತ್ನಮಾನಸ : ನೂತನ ವಿದ್ಯಾರ್ಥಿಗಳ ಪ್ರವೇಶೋತ್ಸವ ಸಮಾರಂಭ

Suddi Udaya

ಬೆಳ್ತಂಗಡಿ ಪತ್ರಕರ್ತರಿಗೆ ಅಪಘಾತ ವಿಮೆ ಯೋಜನೆ ನೋಂದಣಿ

Suddi Udaya

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya

ಅಳದಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ -ಬಾಲಕಿಯರ ಖೋ -ಖೋ ಪಂದ್ಯಾಟ ಉದ್ಘಾಟನೆ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya
error: Content is protected !!