25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

ಬೆಳ್ತಂಗಡಿ: ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ ನಡೆದ ಘಟನೆ ಇಂದು ಜೂ.29 ಮಧ್ಯಾಹ್ನ ನಡೆದಿದೆ.

ಗೂಡ್ಸ್ ಹೊತ್ತ ಟೆಂಪೋ, ಐರಾವತ ಬಸ್, ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ಸನ್ನು ಗೂಡ್ಸ್ ಹೊತ್ತ ಟೆಂಪೋ ಓವರ್ ಟೇಕ್ ಮಾಡುವ ಭರದಲ್ಲಿ ದುರ್ಘಟನೆ ಸಂಭವಿಸಿತು. ಓವರ್ ಟೇಕ್ ಮಾಡುವ ಸಂದರ್ಭ ಎದುರಿನಿಂದ ರಾಜಹಂಸ ಬಸ್ ಬರುತ್ತಿದ್ದು, ಟೆಂಪೋ ಚಾಲಕ ನಿಯಂತ್ರಣ ಕಳೆದುಕೊಂಡು ರಾಜಹಂಸಕ್ಕೆ ಡಿಕ್ಕಿ‌ ಹೊಡೆದು, ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ.

ಇನ್ನೊಂದೆಡೆ ರಾಜಹಂಸ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾದವು.

ಸ್ಥಳದಲ್ಲಿ ಟ್ರಾಫಿಕ್ ದಟ್ಟಣೆಯಾಗಿದ್ದು, ಎರಡು ಕಡೆಯೂ ವಾಹನಗಳು ಸಾಲುಗಟ್ಟಿ ನಿಂತಿವೆ. ಸಂಚಾರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

Related posts

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya

ಉಜಿರೆಯಲ್ಲಿ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಯೂಮ್ ಸೆಂಟರ್ ಪ್ರಾರಂಭೋತ್ಸವ ಡ್ಯಾನ್ಸ್ ತರಭೇತಿ ಪಡೆಯುವವರಿಗೆ ತ್ರಿಲೋಕ್ ಉತ್ತಮ ವೇದಿಕೆ- ಸುಧೀರ್ ಜೈನ್

Suddi Udaya

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya
error: Content is protected !!