25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

ಶಿಶಿಲ :ಜಿಲ್ಲಾಧಿಕಾರಿಯವರ ಆದೇಶದಂತೆ ಶಿಶಿಲ ಗ್ರಾಮಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿಯ ಸಭೆಯು ಜೂ.28 ರಂದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಸಲಾಯಿತು.

ಗ್ರಾಮದಲ್ಲಿ ಇರುವ ಸಮಸ್ಯೆಗಳ ಪಟ್ಟಿ ಮಾಡಿ ಇಲಾಖೆಗಳಿಗೆ ಮಾಹಿತಿ ನೀಡಿ ಇಲಾಖೆಗಳಿಂದ ತಕ್ಷಣ ಕ್ರಮಕೈಗೊಳ್ಳಲು ಗ್ರಾಮ ಪಂಚಾಯತ್ ಮಟ್ಟದ ವಿಪತ್ತು ನಿರ್ವಹಣಾ ಸಭೆಯಲ್ಲಿ ನಿರ್ಧಾರಿಸಲಾಯಿತು. ವಿಪತ್ತು ನಿರ್ವಹಣಾ ತಂಡದ ಸದಸ್ಯರು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ತಂಡದ ಸಭೆಯಲ್ಲಿ ಸೂಚಿಸಲಾಯಿತು. ಗ್ರಾಮದಲ್ಲಿ ಇರುವ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳನ್ನು ತೆರವುಗೊಳ್ಳಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಸುಧೀನ್ ಡಿ., ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ ಎಂ, ಗ್ರಾಮ ಆಡಳಿತಾಧಿಕಾರಿ ತೇಜಸ್ವಿ, ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶಶಿಧರ್, ಸಂದೀಪ್, ಗಸ್ತು ಅರಣ್ಯ ಪಾಲಕ ನಾಗಲಿಂಗ ಬಡಿಗೇರ, ಕೊಳಕ್ಕೆಬೈಲು ಶಾಲಾ ಮುಖ್ಯೋಪಾಧ್ಯಾಯರಾದ ರೊನಾಲ್ಡ್ ಮಿನೇಜಸ್, ಹೆವಾಜೆ ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್, ಆಶ್ರಮ ಶಾಲಾ ಅಧ್ಯಾಪಕರಾದ ಕರುಣಾಕರ, ಸಮುದಾಯ ಆರೋಗ್ಯ ಅಧಿಕಾರಿ ಪವಿತ್ರ, ಅಂಗನವಾಡಿ ಕಾರ್ಯಕರ್ತೆಯರಾದ ಯಶೋದಾ, ಕುಸುಮಾವತಿ, ನಯನ ಕುಮಾರಿ, ಆಶಾ ಕಾರ್ಯಕರ್ತೆ ರೂಪ, ಸಂಜೀವಿನಿ ಒಕ್ಕೂಟದ ಎಂಬಿಕೆ ಶಾರದಾ, ಎಲ್ ಸಿ ಆರ್ ಪಿ ಶಶಿ, ಕೃಷಿ ಸಖಿ ವಸಂತಿ, ಪಶು ಸಖಿ ಆಶಿಕಾ, ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರಾದ ಕಿರಣ್, ಗಂಗಾಧರ, ಯುವಕ ಮಂಡಲ ಸದಸ್ಯ ಪದ್ಮನಾಭ, ರಾಧಾಕೃಷ್ಣ ಗೌಡ ಗುತ್ತು ಮುಂತಾದವರು ಭಾಗವಹಿಸಿದ್ದರು.

Related posts

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya
error: Content is protected !!