22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

ಶಿಶಿಲ :ಜಿಲ್ಲಾಧಿಕಾರಿಯವರ ಆದೇಶದಂತೆ ಶಿಶಿಲ ಗ್ರಾಮಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿಯ ಸಭೆಯು ಜೂ.28 ರಂದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಸಲಾಯಿತು.

ಗ್ರಾಮದಲ್ಲಿ ಇರುವ ಸಮಸ್ಯೆಗಳ ಪಟ್ಟಿ ಮಾಡಿ ಇಲಾಖೆಗಳಿಗೆ ಮಾಹಿತಿ ನೀಡಿ ಇಲಾಖೆಗಳಿಂದ ತಕ್ಷಣ ಕ್ರಮಕೈಗೊಳ್ಳಲು ಗ್ರಾಮ ಪಂಚಾಯತ್ ಮಟ್ಟದ ವಿಪತ್ತು ನಿರ್ವಹಣಾ ಸಭೆಯಲ್ಲಿ ನಿರ್ಧಾರಿಸಲಾಯಿತು. ವಿಪತ್ತು ನಿರ್ವಹಣಾ ತಂಡದ ಸದಸ್ಯರು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ತಂಡದ ಸಭೆಯಲ್ಲಿ ಸೂಚಿಸಲಾಯಿತು. ಗ್ರಾಮದಲ್ಲಿ ಇರುವ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳನ್ನು ತೆರವುಗೊಳ್ಳಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಸುಧೀನ್ ಡಿ., ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ ಎಂ, ಗ್ರಾಮ ಆಡಳಿತಾಧಿಕಾರಿ ತೇಜಸ್ವಿ, ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶಶಿಧರ್, ಸಂದೀಪ್, ಗಸ್ತು ಅರಣ್ಯ ಪಾಲಕ ನಾಗಲಿಂಗ ಬಡಿಗೇರ, ಕೊಳಕ್ಕೆಬೈಲು ಶಾಲಾ ಮುಖ್ಯೋಪಾಧ್ಯಾಯರಾದ ರೊನಾಲ್ಡ್ ಮಿನೇಜಸ್, ಹೆವಾಜೆ ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್, ಆಶ್ರಮ ಶಾಲಾ ಅಧ್ಯಾಪಕರಾದ ಕರುಣಾಕರ, ಸಮುದಾಯ ಆರೋಗ್ಯ ಅಧಿಕಾರಿ ಪವಿತ್ರ, ಅಂಗನವಾಡಿ ಕಾರ್ಯಕರ್ತೆಯರಾದ ಯಶೋದಾ, ಕುಸುಮಾವತಿ, ನಯನ ಕುಮಾರಿ, ಆಶಾ ಕಾರ್ಯಕರ್ತೆ ರೂಪ, ಸಂಜೀವಿನಿ ಒಕ್ಕೂಟದ ಎಂಬಿಕೆ ಶಾರದಾ, ಎಲ್ ಸಿ ಆರ್ ಪಿ ಶಶಿ, ಕೃಷಿ ಸಖಿ ವಸಂತಿ, ಪಶು ಸಖಿ ಆಶಿಕಾ, ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರಾದ ಕಿರಣ್, ಗಂಗಾಧರ, ಯುವಕ ಮಂಡಲ ಸದಸ್ಯ ಪದ್ಮನಾಭ, ರಾಧಾಕೃಷ್ಣ ಗೌಡ ಗುತ್ತು ಮುಂತಾದವರು ಭಾಗವಹಿಸಿದ್ದರು.

Related posts

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

Suddi Udaya

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya
error: Content is protected !!