September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

ಶಿಶಿಲ :ಜಿಲ್ಲಾಧಿಕಾರಿಯವರ ಆದೇಶದಂತೆ ಶಿಶಿಲ ಗ್ರಾಮಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿಯ ಸಭೆಯು ಜೂ.28 ರಂದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಸಲಾಯಿತು.

ಗ್ರಾಮದಲ್ಲಿ ಇರುವ ಸಮಸ್ಯೆಗಳ ಪಟ್ಟಿ ಮಾಡಿ ಇಲಾಖೆಗಳಿಗೆ ಮಾಹಿತಿ ನೀಡಿ ಇಲಾಖೆಗಳಿಂದ ತಕ್ಷಣ ಕ್ರಮಕೈಗೊಳ್ಳಲು ಗ್ರಾಮ ಪಂಚಾಯತ್ ಮಟ್ಟದ ವಿಪತ್ತು ನಿರ್ವಹಣಾ ಸಭೆಯಲ್ಲಿ ನಿರ್ಧಾರಿಸಲಾಯಿತು. ವಿಪತ್ತು ನಿರ್ವಹಣಾ ತಂಡದ ಸದಸ್ಯರು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ತಂಡದ ಸಭೆಯಲ್ಲಿ ಸೂಚಿಸಲಾಯಿತು. ಗ್ರಾಮದಲ್ಲಿ ಇರುವ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳನ್ನು ತೆರವುಗೊಳ್ಳಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಸುಧೀನ್ ಡಿ., ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ ಎಂ, ಗ್ರಾಮ ಆಡಳಿತಾಧಿಕಾರಿ ತೇಜಸ್ವಿ, ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶಶಿಧರ್, ಸಂದೀಪ್, ಗಸ್ತು ಅರಣ್ಯ ಪಾಲಕ ನಾಗಲಿಂಗ ಬಡಿಗೇರ, ಕೊಳಕ್ಕೆಬೈಲು ಶಾಲಾ ಮುಖ್ಯೋಪಾಧ್ಯಾಯರಾದ ರೊನಾಲ್ಡ್ ಮಿನೇಜಸ್, ಹೆವಾಜೆ ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್, ಆಶ್ರಮ ಶಾಲಾ ಅಧ್ಯಾಪಕರಾದ ಕರುಣಾಕರ, ಸಮುದಾಯ ಆರೋಗ್ಯ ಅಧಿಕಾರಿ ಪವಿತ್ರ, ಅಂಗನವಾಡಿ ಕಾರ್ಯಕರ್ತೆಯರಾದ ಯಶೋದಾ, ಕುಸುಮಾವತಿ, ನಯನ ಕುಮಾರಿ, ಆಶಾ ಕಾರ್ಯಕರ್ತೆ ರೂಪ, ಸಂಜೀವಿನಿ ಒಕ್ಕೂಟದ ಎಂಬಿಕೆ ಶಾರದಾ, ಎಲ್ ಸಿ ಆರ್ ಪಿ ಶಶಿ, ಕೃಷಿ ಸಖಿ ವಸಂತಿ, ಪಶು ಸಖಿ ಆಶಿಕಾ, ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರಾದ ಕಿರಣ್, ಗಂಗಾಧರ, ಯುವಕ ಮಂಡಲ ಸದಸ್ಯ ಪದ್ಮನಾಭ, ರಾಧಾಕೃಷ್ಣ ಗೌಡ ಗುತ್ತು ಮುಂತಾದವರು ಭಾಗವಹಿಸಿದ್ದರು.

Related posts

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಪರಿಸರ ಸೂಕ್ಷ್ಮ ಪ್ರದೇಶವನ್ನು ನಿಗದಿಪಡಿಸಿ ಕರಡು ಅಧಿಸೂಚನೆ : ರಾಜ್ಯ ಸರ್ಕಾರವು ಭೌತಿಕ ಸಮೀಕ್ಷೆ ನಡೆಸಿ ಜನವಸತಿ ಪ್ರದೇಶ ವಿರಹಿತಗೊಳಿಸಿ ಜನರ ಆತಂಕವನ್ನು ನಿವಾರಿಸಬೇಕು : ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya
error: Content is protected !!