ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ‌ ತನಕ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕುರಿತು ಕಳೆದ ಕೆಲವು ದಿನಗಳ ಹಿಂದೆ ಸುದ್ದಿ ಉದಯ ಪತ್ರಿಕೆ ವರದಿ ಪ್ರಕಟಿಸಿತ್ತು.

ನಂತರ ಬಳಂಜ ಗ್ರಾಮ ಪಂಚಾಯತ್ ಗೆ, ಅರಣ್ಯ ಇಲಾಖೆಗೆ,ಮೆಸ್ಕಾಂ ಇಲಾಖೆಗೆ ಸ್ಥಳೀಯರಾದ ಸಂತೋಷ್ ಪಿ ಕೋಟ್ಯಾನ್, ಜಗದೀಶ್, ರಕ್ಷಿತ್ ಮನವಿ ಸಲ್ಲಿಸಿದ್ದರು. ಮನವಿಗೆ ತಕ್ಷಣ ಸ್ಪಂದಿಸಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೋಭಾ ಕುಲಾಲ್, ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಸುರೇಶ್ ಗೌಡ, ಮೆಸ್ಕಾಂ ಇಲಾಖೆಯ ಜೆಇ ಸಂದೀಪ್ ಅವರು ಸ್ಥಳಕ್ಕೆ ಬಂದು ಸ್ಥಳ ವಿಕ್ಷೀಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರು.

ಇಂದು ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾರ್ಯ ಖಾಸಿಂ ಮತ್ತು ತಂಡದಿಂದ ನಡೆಯುತ್ತಿದೆ.

Leave a Comment

error: Content is protected !!