April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆ: ಮಹಿಳೆಯರು ಎಲ್ಲಾ ಜವಬ್ಧಾರಿಗಳನ್ನು ನಿಭಾಹಿಸುದರ ಜೊತೆಗೆ ತಮ್ಮ ಕನಸುಗಳನ್ನು ಸಕಾರಗೊಳಿಸಲು ಪ್ರಯತ್ನಿಸಬೇಕು. ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಜವಬ್ಧಾರಿಗಳಿವೆ, ಆದರೂ ಎಲ್ಲಾ ಜವಬ್ಧಾರಿಗಳನ್ನು ಅತ್ಯಂತ ಹೆಚ್ಚಿನ ಮುತುವರ್ಜಿಯಿಂದ ಮಾಡುತ್ತಾಳೆ, ಅದರ ಜೊತೆಗೆ ತನ್ನ ಕನಸ್ಸುಗಳನ್ನು ಮತ್ತು ಆಸೆಗಳನ್ನು ಸಕಾರ ಮಾಡಲು ಪ್ರಯತ್ನಿಸಬೇಕು. ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕಲ್ಪನೆಯ ಈ ರುಡ್‌ಸೆಟ್ ಸಂಸ್ಥೆಯು ಕಳೆದ 42 ವರ್ಷಗಳಿಂದ ದೇಶದ ಅನೇಕ ಮಹಿಳೆಯರ ಸ್ವ ಉದ್ಯೋಗದ ಕನಸುಗಳನ್ನು ಸಕಾರಗೊಳಿಸಿದೆ. ಉಜಿರೆಯಲ್ಲಿ ಪ್ರಾರಂಭಗೊಂಡ ಈ ರುಡ್‌ಸೆಟ್ ಸಂಸ್ಥೆ ದೇಶದ ಪ್ರತಿ ಜಿಲ್ಲೆಯಲ್ಲೂ ಮಾದರಿ ಸಂಸ್ಥೆ (ಆರ್‌ಸೆಟಿ) ಗಳಾಗಿ ಸ್ಥಾಪನೆಗೊಂಡಿರುವುದು ನಮಗೆ ಹೆಮ್ಮೆಯ ವಿಚಾರ ಎಂದು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ಕಾರಂತ್ ರವರು ಅಭಿಪ್ರಾಯಪಟ್ಟರು.

ಅವರುಉಜಿರೆ ರುಡ್ ಸೆಟ್ ನಲ್ಲಿ ನಡೆದ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಭಿರಾರ್ಥೀಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ ಅತಿಥಿಗಳನ್ನು ಸ್ವಾಗತಿಸಿ ತರಬೇತಿಯ ಹಿನ್ನೋಟ ನೀಡಿದರು. ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ವಿಜಯಕುಮಾರ್ ಬಿ.ಪಿ ಅಧ್ಯಕ್ಷತೆ ವಹಿಸಿದ್ದರು, ಹಿರಿಯ ಉಪನ್ಯಾಸಕ ಕರುಣಾಕರ್ ಜೈನ್ ಕಾರ್ಯಕ್ರಮ ನಿರೂಪಿಸಿ, ಅಬ್ರಹಾಂ ಜೇಮ್ಸ್‌ರವರು ವಂದಿಸಿದರು. 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 32 ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!