22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆ: ಮಹಿಳೆಯರು ಎಲ್ಲಾ ಜವಬ್ಧಾರಿಗಳನ್ನು ನಿಭಾಹಿಸುದರ ಜೊತೆಗೆ ತಮ್ಮ ಕನಸುಗಳನ್ನು ಸಕಾರಗೊಳಿಸಲು ಪ್ರಯತ್ನಿಸಬೇಕು. ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಜವಬ್ಧಾರಿಗಳಿವೆ, ಆದರೂ ಎಲ್ಲಾ ಜವಬ್ಧಾರಿಗಳನ್ನು ಅತ್ಯಂತ ಹೆಚ್ಚಿನ ಮುತುವರ್ಜಿಯಿಂದ ಮಾಡುತ್ತಾಳೆ, ಅದರ ಜೊತೆಗೆ ತನ್ನ ಕನಸ್ಸುಗಳನ್ನು ಮತ್ತು ಆಸೆಗಳನ್ನು ಸಕಾರ ಮಾಡಲು ಪ್ರಯತ್ನಿಸಬೇಕು. ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕಲ್ಪನೆಯ ಈ ರುಡ್‌ಸೆಟ್ ಸಂಸ್ಥೆಯು ಕಳೆದ 42 ವರ್ಷಗಳಿಂದ ದೇಶದ ಅನೇಕ ಮಹಿಳೆಯರ ಸ್ವ ಉದ್ಯೋಗದ ಕನಸುಗಳನ್ನು ಸಕಾರಗೊಳಿಸಿದೆ. ಉಜಿರೆಯಲ್ಲಿ ಪ್ರಾರಂಭಗೊಂಡ ಈ ರುಡ್‌ಸೆಟ್ ಸಂಸ್ಥೆ ದೇಶದ ಪ್ರತಿ ಜಿಲ್ಲೆಯಲ್ಲೂ ಮಾದರಿ ಸಂಸ್ಥೆ (ಆರ್‌ಸೆಟಿ) ಗಳಾಗಿ ಸ್ಥಾಪನೆಗೊಂಡಿರುವುದು ನಮಗೆ ಹೆಮ್ಮೆಯ ವಿಚಾರ ಎಂದು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ಕಾರಂತ್ ರವರು ಅಭಿಪ್ರಾಯಪಟ್ಟರು.

ಅವರುಉಜಿರೆ ರುಡ್ ಸೆಟ್ ನಲ್ಲಿ ನಡೆದ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಭಿರಾರ್ಥೀಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ ಅತಿಥಿಗಳನ್ನು ಸ್ವಾಗತಿಸಿ ತರಬೇತಿಯ ಹಿನ್ನೋಟ ನೀಡಿದರು. ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ವಿಜಯಕುಮಾರ್ ಬಿ.ಪಿ ಅಧ್ಯಕ್ಷತೆ ವಹಿಸಿದ್ದರು, ಹಿರಿಯ ಉಪನ್ಯಾಸಕ ಕರುಣಾಕರ್ ಜೈನ್ ಕಾರ್ಯಕ್ರಮ ನಿರೂಪಿಸಿ, ಅಬ್ರಹಾಂ ಜೇಮ್ಸ್‌ರವರು ವಂದಿಸಿದರು. 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 32 ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya
error: Content is protected !!