ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನಾಚರಣೆ

ಕೊಯ್ಯೂರು : “ಸ್ವಾಸ್ತ್ಯ ಸಮಾಜದ ನಿರ್ಮಾಣದಲ್ಲಿ ಯುವಜನರ ಪಾತ್ರ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಮಾದಕ ದ್ರವ್ಯ ಮತ್ತು ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಪೂರ್ಣ ಸಮಾಜದ ನಿರ್ಮಾಣದಲ್ಲಿ ಕೈ ಜೋಡಿಸಬೇಕೆಂದು ಬೆಳ್ತಂಗಡಿ ಆರಕ್ಷಕ ವೃತ್ತ ನಿರೀಕ್ಷಕ ವಸಂತ ಆಚಾರ್ ವಿದ್ಯಾರ್ಥಿಗಳಿಗೆ ಕರೆನೀಡಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜರುಗಿದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ ಬಾಲಕಿಯರು ಸಮಾಜದಲ್ಲಿ ನಡೆಯುವ ಅನಿಷ್ಠಗಳಿಗೆ ಬಲಿಯಾಗಬಾರದೆಂದು ಕಾಳಜಿಯನ್ನು ವ್ಯಕ್ತಪಡಿಸಿದರು.


ಬೆಳ್ತಂಗಡಿ ಆರಕ್ಷಕ ಠಾಣೆಯ ಉಪನೀರಿಕ್ಷಕರಾದ ಮುರಳೀಧರ ನಾಯಕ್ ಮಾತನಾಡಿ ಮಾದಕ ದ್ರವ್ಯ ಮತ್ತು ಅಕ್ರಮ ಸಾಗಾಟದಲ್ಲಿ ಯುವಜನರನ್ನು ತೊಡಗಿಸಿಕೊಳ್ಳುವ ಹುನ್ನಾರ ನಡೆಯುತ್ತಿದ್ದು ವಿದ್ಯಾರ್ಥಿಗಳು ಜಾಗರೂಕತೆಯಿಂದ ಮುನ್ನಡೆಯಬೇಕು ಹಾಗೂ ನಮ್ಮ ಸಮಾಜ ಈ ವಿಷ ವರ್ತುಲದಲ್ಲಿ ಸಿಲುಕದಂತೆ ಜಾಗೃತಿ ವಹಿಸಬೇಕೆಂದು ಕರೆ ನೀಡಿದರು. ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ಪ್ರಮಾಣವಚನಗೈದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯರಾದ ಮೋಹನ ಗೌಡ ಪ್ರಾಸ್ತವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಕುಮಾರಿ ತೃಪ್ತಿ ಧನ್ಯವಾದವಿತ್ತರು.

Related posts

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya
error: Content is protected !!