39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

ಧರ್ಮಸ್ಥಳ. ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನಾ ಕಾರ್ಯಕ್ರಮವು ಇತ್ತೀಚೆಗೆ ಅಮೃತವರ್ಷಿಣಿ ಸಭಾಂಗಣದಲ್ಲಿ ಜರಗಿತು.


ಮುಖ್ಯ ಅತಿಥಿಯಾಗಿ ಎಸ್ ಡಿ ಯಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ಧನ್ಯ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಇವರು ಪಠ್ಯದ ಜೊತೆಗೆ ಪೂರಕವಾದ ಇತರ ಚಟುವಟಿಕೆಗಳಿಗೂ ಹೆಚ್ಚಿನ ಗಮನ ಕೊಡಬೇಕು. ಇದು ಊಟದ ಜೊತೆ ಉಪ್ಪಿನಕಾಯಿ ಇದ್ದoತೆ. ವಿದ್ಯಾರ್ಥಿಗಳು ಸಿಕ್ಕಿದ್ದನ್ನು ಹೆಕ್ಕಿ ತಿನ್ನುವ ಪಕ್ಷಿಗಳಾಬೇಕು. ಓದುವ ಹವ್ಯಾಸವನ್ನು ಹೆಚ್ಚು ಬೆಳೆಸಿಕೊಂಡು ಜ್ಞಾನವನ್ನು ಬೆಳೆಸಿಕೊಳ್ಳಬೇಕು ಎಂದರು.
ಶಾಲಾ ಮುಖ್ಯ ಶಿಕ್ಷಕ ಕಮಲ್ ತೇಜು ರಜಪೂತ ಕಾರ್ಯಕ್ರಮಕ್ಕೆ ಶುಭ ಕೋರಿದರು. ಯಕ್ಷಗಾನ ತರಬೇತಿದಾರ ಲಕ್ಷ್ಮಣ ಗೌಡ ಬೆಳಾಲು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕ ಶೇಖರ್ ಗೌಡ ಸ್ವಾಗತಿಸಿ, ಶಿಕ್ಷಕಿ ಸೀಮಾ ವಂದಿಸಿದರು. ಶಿಕ್ಷಕಿ ಶ್ರೀಜಾ ನಿರೂಪಿಸಿದರು. ಎಲ್ಲಾ ಶಿಕ್ಷಕರು ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!