25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

ನಾರಾವಿ: ರಸ್ತೆಯಲ್ಲಿ ನಾಯಿಯೊಂದು ಬೈಕ್‌ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವಿಗೀಡಾದ ಘಟನೆ ಹೊಸ್ಮಾರು ಬಳಿ ಜೂ.28 ರಂದು ಸಂಭವಿಸಿದೆ.

ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ (26ವ) ಎಂಬವರೇ ಮೃತಪಟ್ಟ ಮಹಿಳೆ. ಕಾರ್ಕಳ-ಗುರುವಾಯನಕೆರೆ ರಸ್ತೆಯ ಹೊಸ್ಮಾರು ಸೇತುವೆ ಬಳಿ ಜೂ.28ರ ಸಂಜೆ ಗಂಡನೊಂದಿಗೆ ಬೈಕ್‌ನಲ್ಲಿ ಸಾಗುತ್ತಿದ್ದಾಗ ನಾಯಿ ದಿಢೀರನೆ ಅಡ್ಡ ಬಂದ ಪರಿಣಾಮ ಬೈಕ್ ರಸ್ತೆಗೆಸೆಯಲ್ಪಟ್ಟಿತ್ತು.

ಘಟನೆಯಿಂದ ನೀಕ್ಷಾ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಸ್ವರೂಪದ ಗಾಯವಾಗಿದ್ದು, ಆಸ್ಪತ್ರೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು. ನೀಕ್ಷಾ ಅವರಿಗೆ ಎರಡು ತಿಂಗಳ ಹಿಂದೆಯಷ್ಟೇ ಮದುವೆ ಆಗಿತ್ತು ಎಂದು ತಿಳಿದು ಬಂದಿದೆ.

Related posts

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದ ಕಾರ್ಯಕಾರಿ ಸಭೆ

Suddi Udaya

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya
error: Content is protected !!