September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭಸಂಘ-ಸಂಸ್ಥೆಗಳು

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಉಜಿರೆ: ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಜೂನ್ 30 ರಂದು ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು.

ನೂತನ ಕಟ್ಟಡದ ಉದ್ಘಾಟನೆಯನ್ನು ಶ್ರೀ ಜನಾರ್ಧನ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ ನೇರವೇರಿಸಿ ಮಾತನಾಡಿ 7 ದಶಕಗಳ ಹಿಂದೆ ಉಜಿರೆಯಲ್ಲಿ ಪ್ರಗತಿ ಮಹಿಳಾ ಮಂಡಲವನ್ನು ಕಟ್ಟಿ ಬೆಳೆಸಿದ ಎಲ್ಲರಿಗೂ ವಂದನೆಗಳು. ಅಂದು ಉಜಿರೆ ಕುಗ್ರಾಮವಾಗಿತ್ತು, ಇಂದು ಉಜಿರೆ ಬಹಳಷ್ಟು ಬೆಳೆದಿದೆ. ಪ್ರಗತಿ ಮಹಿಳಾ ಮಂಡಲದಿಂದ ಶಿಕ್ಷಣ ಕೇಂದ್ರ ತೆರೆಯುವಂತಾಗಲಿ ಎಂದರು.

ಶಾಸಕ ಹರೀಶ್ ಪೂಂಜರವರು ಮಾತನಾಡಿ ತಾಯಂದಿರ ಸೇವೆ ಮಾಡುವ ನಿಟ್ಟಿನಲ್ಲಿ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡಕ್ಕೆ 5 ಲಕ್ಷ ಅನುದಾನ ನೀಡಿದ್ದೇನೆ.ಮುಂದೆ ಈ ಮಹಿಳಾ ಮಂಡಲದಿಂದ ಶೈಕ್ಷಣಿಕ ಕಾರ್ಯ ಚಟುವಟಿಕೆಗಳು ನಡೆಯಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಅವರನ್ನು ಪ್ರಗತಿ ಮಹಿಳಾ ಮಂಡಲದ ವತಿಯಿಂದ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಕೆ.ಪ್ರತಾಪಸಿಂಹ ನಾಯಕ್, ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇದರ ಮಾಲಕರಾದ ಕೆ.ಮೋಹನ್ ಕುಮಾರ್,ಪ್ರಗತಿ ಮಹಿಳಾ ಮಂಡಲದ ಗೌರವಾಧ್ಯಕ್ಷೆ ಸರಸ್ವತಿ ಎನ್ ರಾಜ್,ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಬೆಳ್ತಂಗಡಿ ಇದರ ಸವಿತಾ ಜಯದೇವ್ ಉಪಸ್ಥಿತರಿದ್ದರು. ಕೋಶಾಧಿಕಾರಿ ಪೂರ್ಣಿಮಾ ಸಂಜೀವ್ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಪ್ರಗತಿ ಮಹಿಳಾ ಮಂಡಲದ ಏಳಿಗೆಗೆ ದುಡಿದವರನ್ನು ಗೌರವಿಸಲಾಯಿತು. ಉಜಿರೆ ಜನತೆಯ ಪರವಾಗಿ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷರನ್ನು ಗೌರವಿಸಲಾಯಿತು.

ಸಮೀಕ್ಷಾ ಶಿರ್ಲಾಲು ಕಾರ್ಯಕ್ರಮ ನಿರೂಪಿಸಿದರು. ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಸ್ವಾಗತಿಸಿದರು. ಕಾರ್ಯದರ್ಶಿ ಗಾಯತ್ರಿ ಶ್ರೀಧರ್ ಪ್ರಸ್ತಾವಿಕ ಮಾತನ್ನಾಡಿದರು.

Related posts

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!