September 6, 2026
ಆರೋಗ್ಯಶಾಲಾ ಕಾಲೇಜು

ಕಳಿಯ ಗ್ರಾಮ ಪಂಚಾಯಿತಿನಲ್ಲಿ ವಿಶೇಷ ಟಾಸ್ಕ್ಸಫೋರ್ಸ್

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಂಭವನೀಯ ಪ್ರಾಕೃತಿಕ
ವಿಕೋಪದ ಬಗ್ಗೆ ವಿಶೇಷ ಟಾಸ್ಕ್ ಫೋರ್ಸ್ ಸಭೆಯು ಅಧ್ಯಕ್ಷರಾದ ದಿವಾಕರ ಎಂ ರವರ ಅಧ್ಯಕ್ಷತೆಯಲ್ಲಿ ಜೂ. 29ರಂದು ಜರಗಿತು.

ಪ್ರಕೃತಿ ವಿಕೋಪದ ಬಗ್ಗೆ ಸಮೀಕ್ಷೆ ನಡೆಸಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ,ಡೆಂಗ್ಯೂ ಜ್ವರದ ಬಗ್ಗೆ ವಿಶೇಷ ಕಾಳಜಿ ವಹಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕ್ರಮ ವಹಿಸುವುದು,ವಿದ್ಯುತ್ ಸಂಪರ್ಕದ ಲೈನ್ ಗಳಿಗೆ ತಾಗಿಕೊಂಡಿರುವ ಮರಗಳನ್ನು ತೆರವು ಮಾಡಲು ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆ, ಪಂಚಾಯತ್ ಜಂಟಿ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ವಹಿಸುವುದು. ಅಪಾಯದಂಚಿನಲ್ಲಿರುವ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸಂಬಂಧಿಸಿದ ಇಲಾಖೆಗೆ ತುರ್ತು ವರದಿ ನೀಡಿ
ಕ್ರಮವಹಿಸುವುದು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ಮಾಹಿತಿ ನೀಡಿದರು.
ಸದಸ್ಯರಾದ ಅಬ್ದುಲ್ ಕರೀಮ್,ಶ್ರೀಮತಿ ಸುಭಾಷಿಣಿ ಕೆ, ಶ್ರೀಮತಿ ಮೋಹಿನಿ,ವಿಜಯ ಗೌಡ, ಲತೀಫ್ ಪರಿಮ, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ದನ್ಯವಾದವಿತ್ತರು.
ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಯ ಮುಖ್ಯಸ್ಥರು,ಆರೋಗ್ಯ ಇಲಾಖೆಯ ಸಿಬ್ಬಂದಿ,ಅಂಗನವಾಡಿ ಕಾರ್ಯಕರ್ತೆ,ಗ್ರಾಮ ಬೀಟ್ ಪೋಲಿಸ್ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

Related posts

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಟಿ. ವಿ. ಉದ್ಘಾಟನೆ ಮತ್ತು ಪೋಷಕರ ಮಹಾಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಭಾರೀ ಮಳೆ: ನಾಳೆ(ಜು.2) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya
error: Content is protected !!