24.6 C
ಪುತ್ತೂರು, ಬೆಳ್ತಂಗಡಿ
May 18, 2025
ಆರೋಗ್ಯಶಾಲಾ ಕಾಲೇಜು

ಕಳಿಯ ಗ್ರಾಮ ಪಂಚಾಯಿತಿನಲ್ಲಿ ವಿಶೇಷ ಟಾಸ್ಕ್ಸಫೋರ್ಸ್

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಂಭವನೀಯ ಪ್ರಾಕೃತಿಕ
ವಿಕೋಪದ ಬಗ್ಗೆ ವಿಶೇಷ ಟಾಸ್ಕ್ ಫೋರ್ಸ್ ಸಭೆಯು ಅಧ್ಯಕ್ಷರಾದ ದಿವಾಕರ ಎಂ ರವರ ಅಧ್ಯಕ್ಷತೆಯಲ್ಲಿ ಜೂ. 29ರಂದು ಜರಗಿತು.

ಪ್ರಕೃತಿ ವಿಕೋಪದ ಬಗ್ಗೆ ಸಮೀಕ್ಷೆ ನಡೆಸಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ,ಡೆಂಗ್ಯೂ ಜ್ವರದ ಬಗ್ಗೆ ವಿಶೇಷ ಕಾಳಜಿ ವಹಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕ್ರಮ ವಹಿಸುವುದು,ವಿದ್ಯುತ್ ಸಂಪರ್ಕದ ಲೈನ್ ಗಳಿಗೆ ತಾಗಿಕೊಂಡಿರುವ ಮರಗಳನ್ನು ತೆರವು ಮಾಡಲು ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆ, ಪಂಚಾಯತ್ ಜಂಟಿ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ವಹಿಸುವುದು. ಅಪಾಯದಂಚಿನಲ್ಲಿರುವ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸಂಬಂಧಿಸಿದ ಇಲಾಖೆಗೆ ತುರ್ತು ವರದಿ ನೀಡಿ
ಕ್ರಮವಹಿಸುವುದು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ಮಾಹಿತಿ ನೀಡಿದರು.
ಸದಸ್ಯರಾದ ಅಬ್ದುಲ್ ಕರೀಮ್,ಶ್ರೀಮತಿ ಸುಭಾಷಿಣಿ ಕೆ, ಶ್ರೀಮತಿ ಮೋಹಿನಿ,ವಿಜಯ ಗೌಡ, ಲತೀಫ್ ಪರಿಮ, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ದನ್ಯವಾದವಿತ್ತರು.
ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಯ ಮುಖ್ಯಸ್ಥರು,ಆರೋಗ್ಯ ಇಲಾಖೆಯ ಸಿಬ್ಬಂದಿ,ಅಂಗನವಾಡಿ ಕಾರ್ಯಕರ್ತೆ,ಗ್ರಾಮ ಬೀಟ್ ಪೋಲಿಸ್ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

Related posts

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!