23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಶಾಲಾ ಕಾಲೇಜು

ಕಳಿಯ ಗ್ರಾಮ ಪಂಚಾಯಿತಿನಲ್ಲಿ ವಿಶೇಷ ಟಾಸ್ಕ್ಸಫೋರ್ಸ್

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಂಭವನೀಯ ಪ್ರಾಕೃತಿಕ
ವಿಕೋಪದ ಬಗ್ಗೆ ವಿಶೇಷ ಟಾಸ್ಕ್ ಫೋರ್ಸ್ ಸಭೆಯು ಅಧ್ಯಕ್ಷರಾದ ದಿವಾಕರ ಎಂ ರವರ ಅಧ್ಯಕ್ಷತೆಯಲ್ಲಿ ಜೂ. 29ರಂದು ಜರಗಿತು.

ಪ್ರಕೃತಿ ವಿಕೋಪದ ಬಗ್ಗೆ ಸಮೀಕ್ಷೆ ನಡೆಸಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ,ಡೆಂಗ್ಯೂ ಜ್ವರದ ಬಗ್ಗೆ ವಿಶೇಷ ಕಾಳಜಿ ವಹಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕ್ರಮ ವಹಿಸುವುದು,ವಿದ್ಯುತ್ ಸಂಪರ್ಕದ ಲೈನ್ ಗಳಿಗೆ ತಾಗಿಕೊಂಡಿರುವ ಮರಗಳನ್ನು ತೆರವು ಮಾಡಲು ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆ, ಪಂಚಾಯತ್ ಜಂಟಿ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ವಹಿಸುವುದು. ಅಪಾಯದಂಚಿನಲ್ಲಿರುವ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸಂಬಂಧಿಸಿದ ಇಲಾಖೆಗೆ ತುರ್ತು ವರದಿ ನೀಡಿ
ಕ್ರಮವಹಿಸುವುದು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ಮಾಹಿತಿ ನೀಡಿದರು.
ಸದಸ್ಯರಾದ ಅಬ್ದುಲ್ ಕರೀಮ್,ಶ್ರೀಮತಿ ಸುಭಾಷಿಣಿ ಕೆ, ಶ್ರೀಮತಿ ಮೋಹಿನಿ,ವಿಜಯ ಗೌಡ, ಲತೀಫ್ ಪರಿಮ, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ದನ್ಯವಾದವಿತ್ತರು.
ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಯ ಮುಖ್ಯಸ್ಥರು,ಆರೋಗ್ಯ ಇಲಾಖೆಯ ಸಿಬ್ಬಂದಿ,ಅಂಗನವಾಡಿ ಕಾರ್ಯಕರ್ತೆ,ಗ್ರಾಮ ಬೀಟ್ ಪೋಲಿಸ್ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

Related posts

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಕೆಂಪೇಗೌಡರ ಭಾವಚಿತ್ರ ಚಿತ್ರಿಸುವ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಪೂಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya
error: Content is protected !!