22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಶಾಲಾ ಕಾಲೇಜು

ಕಳಿಯ ಗ್ರಾಮ ಪಂಚಾಯಿತಿನಲ್ಲಿ ವಿಶೇಷ ಟಾಸ್ಕ್ಸಫೋರ್ಸ್

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಂಭವನೀಯ ಪ್ರಾಕೃತಿಕ
ವಿಕೋಪದ ಬಗ್ಗೆ ವಿಶೇಷ ಟಾಸ್ಕ್ ಫೋರ್ಸ್ ಸಭೆಯು ಅಧ್ಯಕ್ಷರಾದ ದಿವಾಕರ ಎಂ ರವರ ಅಧ್ಯಕ್ಷತೆಯಲ್ಲಿ ಜೂ. 29ರಂದು ಜರಗಿತು.

ಪ್ರಕೃತಿ ವಿಕೋಪದ ಬಗ್ಗೆ ಸಮೀಕ್ಷೆ ನಡೆಸಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ,ಡೆಂಗ್ಯೂ ಜ್ವರದ ಬಗ್ಗೆ ವಿಶೇಷ ಕಾಳಜಿ ವಹಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕ್ರಮ ವಹಿಸುವುದು,ವಿದ್ಯುತ್ ಸಂಪರ್ಕದ ಲೈನ್ ಗಳಿಗೆ ತಾಗಿಕೊಂಡಿರುವ ಮರಗಳನ್ನು ತೆರವು ಮಾಡಲು ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆ, ಪಂಚಾಯತ್ ಜಂಟಿ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ವಹಿಸುವುದು. ಅಪಾಯದಂಚಿನಲ್ಲಿರುವ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸಂಬಂಧಿಸಿದ ಇಲಾಖೆಗೆ ತುರ್ತು ವರದಿ ನೀಡಿ
ಕ್ರಮವಹಿಸುವುದು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ಮಾಹಿತಿ ನೀಡಿದರು.
ಸದಸ್ಯರಾದ ಅಬ್ದುಲ್ ಕರೀಮ್,ಶ್ರೀಮತಿ ಸುಭಾಷಿಣಿ ಕೆ, ಶ್ರೀಮತಿ ಮೋಹಿನಿ,ವಿಜಯ ಗೌಡ, ಲತೀಫ್ ಪರಿಮ, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ದನ್ಯವಾದವಿತ್ತರು.
ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಯ ಮುಖ್ಯಸ್ಥರು,ಆರೋಗ್ಯ ಇಲಾಖೆಯ ಸಿಬ್ಬಂದಿ,ಅಂಗನವಾಡಿ ಕಾರ್ಯಕರ್ತೆ,ಗ್ರಾಮ ಬೀಟ್ ಪೋಲಿಸ್ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

Related posts

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!