ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya

ಕೇಂದ್ರದ ಮಾಜಿ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿಯವರು ಅಕಾಲಿಕವಾಗಿ ವಿಧಿವಶರಾದ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಸಮಾಜ ಸೇವಕಿ, ಭರತನಾಟ್ಯ ಕಲಾವಿದೆಯಾಗಿದ್ದ ಅವರ ಅಗಲಿಕೆ, ಹೆತ್ತವರಿಗೆ, ಕುಟುಂಬ ಸದಸ್ಯರಿಗೆ ಅದೆಷ್ಟು ನೋವನ್ನು ತಂದಿದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ದೇವರು ಅಗಲಿದ ಚೇತನಕ್ಕೆ ಸದ್ಗತಿ ಕರುಣಿಸಲಿ, ಕುಟುಂಬ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ರವರು ಸಂತಾಪ ಸೂಚಿಸಿದರು.

Leave a Comment

error: Content is protected !!