ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ಜೂ.30 ರಂದು ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು.

ನೀರಚಿಲುಮೆ ನಿನಾದದ ಶ್ರೀಮತಿ ಸೋನಿಯಾ ಯಶೋವರ್ಮ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ,
ಭತ್ತದಲ್ಲಿರುವ ಜೊಳ್ಳು ಮತ್ತು ಹೊಟ್ಟನ್ನು ಆರಿಸಿ ಭತ್ತವನ್ನು ತೆಗೆದಂತೆ, ವಿದ್ಯಾರ್ಥಿಗಳು ಒಳ್ಳೆಯ ಗುಣವನ್ನು ಅಳವಡಿಸಿ ಕೊಳ್ಳುವುದರೊಂದಿಗೆ ಶಿಕ್ಷಣ ಮತ್ತು ಶಿಕ್ಷಣೇತರ ಚಟುವಟಿಕೆಗೆ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕೆಂದು ಕರೆಯಿತ್ತರು.

ನಿಲಯಪಾಲಕರಾದ ಯತೀಶ್ .ಕೆ ಬಳಂಜರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಭತ್ತ ನಾಟಿಯ ವಿವಿಧ ಮಜಲುಗಳನ್ನು ವಿಸ್ತಾರವಾಗಿ ವಿವರಿಸಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ನಿತ್ಯದ ದಿನಚರಿಯಲ್ಲಿ ಕೃಷಿಗೆ ಆದ್ಯತೆ ನೀಡುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ವಸತಿ ನಿಲಯದ ಅಧ್ಯಾಪಕರಾದ ರವಿಚಂದ್ರ ಧನ್ಯವಾದ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಿಬ್ಬಂಧಿಗಳಾದ ಉದಯರಾಜ್, ದೀಪಕ್ .ಕೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಭತ್ತದ ಬೀಜಗಳನ್ನು ಹಾಕಿ ಅನುಭವ ಪಡೆದುಕೊಂಡರು.

Leave a Comment

error: Content is protected !!