30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

ಉಜಿರೆ: ಸುರಕ್ಷಾ ಮೆಡಿಕಲ್ಸ್ ನ‌ ಮಾಲೀಕರೂ, ಸೇವಾಭಾರತಿ ಕನ್ಯಾಡಿ ಇದರ ” ಆರೋಗ್ಯಂ” ವಿಭಾಗದ ಮುಖ್ಯಸ್ಥರೂ ಆಗಿರುವ ರೊ. ಶ್ರೀಧರ ಕೆವಿ ಅವರನ್ನು ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ 66 ನೇ ವಾರ್ಷಿಕ ಮಹಾ ಸಭೆಯಲ್ಲಿ ಸನ್ಮಾನಿಸಲಾಯಿತು.

ಶ್ರೀಧರ ಕೆ.ವಿ ಅವರು ತಾಲೂಕಿನ ಬೇರೆ ಬೇರೆ ಸಂಘ ಸಂಸ್ಥೆ ಗಳನ್ನು ಒಗ್ಗೂಡಿಸಿ ಈ ತನಕ 75 ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸದ್ದು ಮಾತ್ರವಲ್ಲದೆ ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವವರಿಗೆ ರಕ್ತದ ವ್ಯವಸ್ಥೆಯನ್ನೂ ಮಾಡುತ್ತಿದ್ದಾರೆ ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘವು ಅವರನ್ನು ಗುರುತಿಸಿ ಗೌರವಿಸಿದೆ.

ಈ ಸಭೆಯಲ್ಲಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಜಗನ್ನಾಥ್ ಶಿಂಧೆ, ಕಾರ್ಯದರ್ಶಿ ರಾಜೀವ್ ಸಿಂಘಲ್ , ಕರ್ನಾಟಕ ಔಷದ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಘುನಾಥ ರೆಡ್ಡಿ, ಗೌರವ ಕಾರ್ಯದರ್ಶಿ ಎ.ಕೆ ಜೀವನ್ , ಕರ್ನಾಟಕ ಸರಕಾರದ ಮುಖ್ಯ ಔಷಧ ನಿಯಂತ್ರಕರಾದ ಭಾಗೋಜಿ ಟಿ ಖಾನಾಪುರೆ, ಉಪ ಔಷಧ ನಿಯಂತ್ರಕರಾದ ಸುರೇಶ್ ಕೆಂಪಯ್ಯ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya
error: Content is protected !!