July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

ಉಜಿರೆ: ಸುರಕ್ಷಾ ಮೆಡಿಕಲ್ಸ್ ನ‌ ಮಾಲೀಕರೂ, ಸೇವಾಭಾರತಿ ಕನ್ಯಾಡಿ ಇದರ ” ಆರೋಗ್ಯಂ” ವಿಭಾಗದ ಮುಖ್ಯಸ್ಥರೂ ಆಗಿರುವ ರೊ. ಶ್ರೀಧರ ಕೆವಿ ಅವರನ್ನು ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ 66 ನೇ ವಾರ್ಷಿಕ ಮಹಾ ಸಭೆಯಲ್ಲಿ ಸನ್ಮಾನಿಸಲಾಯಿತು.

ಶ್ರೀಧರ ಕೆ.ವಿ ಅವರು ತಾಲೂಕಿನ ಬೇರೆ ಬೇರೆ ಸಂಘ ಸಂಸ್ಥೆ ಗಳನ್ನು ಒಗ್ಗೂಡಿಸಿ ಈ ತನಕ 75 ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸದ್ದು ಮಾತ್ರವಲ್ಲದೆ ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವವರಿಗೆ ರಕ್ತದ ವ್ಯವಸ್ಥೆಯನ್ನೂ ಮಾಡುತ್ತಿದ್ದಾರೆ ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘವು ಅವರನ್ನು ಗುರುತಿಸಿ ಗೌರವಿಸಿದೆ.

ಈ ಸಭೆಯಲ್ಲಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಜಗನ್ನಾಥ್ ಶಿಂಧೆ, ಕಾರ್ಯದರ್ಶಿ ರಾಜೀವ್ ಸಿಂಘಲ್ , ಕರ್ನಾಟಕ ಔಷದ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಘುನಾಥ ರೆಡ್ಡಿ, ಗೌರವ ಕಾರ್ಯದರ್ಶಿ ಎ.ಕೆ ಜೀವನ್ , ಕರ್ನಾಟಕ ಸರಕಾರದ ಮುಖ್ಯ ಔಷಧ ನಿಯಂತ್ರಕರಾದ ಭಾಗೋಜಿ ಟಿ ಖಾನಾಪುರೆ, ಉಪ ಔಷಧ ನಿಯಂತ್ರಕರಾದ ಸುರೇಶ್ ಕೆಂಪಯ್ಯ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Related posts

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya
error: Content is protected !!