September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

ಉಜಿರೆ: ಸುರಕ್ಷಾ ಮೆಡಿಕಲ್ಸ್ ನ‌ ಮಾಲೀಕರೂ, ಸೇವಾಭಾರತಿ ಕನ್ಯಾಡಿ ಇದರ ” ಆರೋಗ್ಯಂ” ವಿಭಾಗದ ಮುಖ್ಯಸ್ಥರೂ ಆಗಿರುವ ರೊ. ಶ್ರೀಧರ ಕೆವಿ ಅವರನ್ನು ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ 66 ನೇ ವಾರ್ಷಿಕ ಮಹಾ ಸಭೆಯಲ್ಲಿ ಸನ್ಮಾನಿಸಲಾಯಿತು.

ಶ್ರೀಧರ ಕೆ.ವಿ ಅವರು ತಾಲೂಕಿನ ಬೇರೆ ಬೇರೆ ಸಂಘ ಸಂಸ್ಥೆ ಗಳನ್ನು ಒಗ್ಗೂಡಿಸಿ ಈ ತನಕ 75 ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸದ್ದು ಮಾತ್ರವಲ್ಲದೆ ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವವರಿಗೆ ರಕ್ತದ ವ್ಯವಸ್ಥೆಯನ್ನೂ ಮಾಡುತ್ತಿದ್ದಾರೆ ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘವು ಅವರನ್ನು ಗುರುತಿಸಿ ಗೌರವಿಸಿದೆ.

ಈ ಸಭೆಯಲ್ಲಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಜಗನ್ನಾಥ್ ಶಿಂಧೆ, ಕಾರ್ಯದರ್ಶಿ ರಾಜೀವ್ ಸಿಂಘಲ್ , ಕರ್ನಾಟಕ ಔಷದ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಘುನಾಥ ರೆಡ್ಡಿ, ಗೌರವ ಕಾರ್ಯದರ್ಶಿ ಎ.ಕೆ ಜೀವನ್ , ಕರ್ನಾಟಕ ಸರಕಾರದ ಮುಖ್ಯ ಔಷಧ ನಿಯಂತ್ರಕರಾದ ಭಾಗೋಜಿ ಟಿ ಖಾನಾಪುರೆ, ಉಪ ಔಷಧ ನಿಯಂತ್ರಕರಾದ ಸುರೇಶ್ ಕೆಂಪಯ್ಯ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Related posts

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya

ಹೊಸಂಗಡಿ: ಸೂರ್ಯನಾರಾಯಣ ದೇವಸ್ಥಾನದ ಬಳಿಯ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ಕಾಮಗಾರಿಗೆ ರೂ.50 ಲಕ್ಷ ಅನುದಾನ– ಶಾಸಕ ಹರೀಶ್ ಪೂಂಜ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya
error: Content is protected !!