September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಜು.1ರಂದು ಎಸ್.ಡಿ.ಎಂ ಸಭಾಭವನದಲ್ಲಿ ನಡೆಯಿತು.


ಕಾಯ೯ಕ್ರಮದಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್, ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಡಿ.ಸಿ ರಾಜೇಶ್ ಶೆಟ್ಟಿ, ಪುತ್ತೂರು ವಿಭಾಗದ ಡಿ.ಸಿ ಅಮಲಿಂಗಯ್ಯ ವಸು ಪೂಜಾರಿ, ಕೆಎಸ್ಸಾರ್ಟಿಸಿ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಧಮ೯ಸ್ಥಳದಿಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಹೋಗುವ ಬಸ್ ಗಳು, ಶಾಲಾ ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್ ಗಳ ಓಡಾಟ ಬಗ್ಗೆ ನಾಗರಿಕರು ಅಭಿಪ್ರಾಯಪಟ್ಟರು. ಗ್ರಾಮೀಣ ಪ್ರದೇಶಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಬರಬೇಕು, ಶನಿವಾರ ಗ್ರಾಮೀಣ ಪ್ರದೇಶಗಳಿಗೆ ಶಾಲಾ ಮಕ್ಕಳ ಅನುಕೂಲವಾಗುವ ರೀತಿಯಲ್ಲಿ ಬಸ್ ಬರಬೇಕು ಎಂದು ಶಾಲಾ ವಿದ್ಯಾರ್ಥಿಗಳು ಆಗ್ರಹಿಸಿದರು.

ಬೆಳ್ತಂಗಡಿ – ವೇಣೂರು ಸರಕಾರಿ ಬಸ್, ಬೆಳ್ತಂಗಡಿ – ಪೆರಾಡಿ, ಕಾಶಿಪಟ್ಣ ಬಸ್, ಪಟ್ರಮೆ, ದಿಡುಪೆ, ನೆರಿಯ, ಕಾಯ೯ತ್ತಡ್ಕ ಮೊದಲಾದ ಪ್ರದೇಶಗಳಲ್ಲಿ ಬಸ್ಸಿನ ಬೇಡಿಕೆ ವ್ಯಕ್ತವಾಯಿತು.
ಸಭೆಯಲ್ಲಿ ವಾಣಿ ಕಾಲೇಜು ಪ್ರಾಂಶುಪಾಲ ಯದುಪತಿ ಗೌಡ, ಸುಧಾಕರ ಅರಿಸಿನ ಮಿಕ್ಕಿ, ರತ್ನಾಕರ್ ಬುಣ್ಣನ್, ಭಾರತಿ ಶೆಟ್ಟಿ ಕುವೆಟ್ಟು, ಮಾಧವ ಶಿಲಾ೯ಲು, ದಿನೇಶ್ ಖಂಡಿಗಾ, ಆಶಾ ಸಲ್ದಾನಾ, ದೀಕ್ಷಿತ್ ದಿಡುಪೆ, ಶಿಶಿಲ ಗ್ರಾ.ಪಂ ಅಧ್ಯಕ್ಷ, ಮೊದಲಾದವರು ಸೇರಿದಂತೆ ಹಲವು ಮಂದಿ ಬೇಡಿಕೆ ಸಲ್ಲಿಸಿದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ

Suddi Udaya

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya
error: Content is protected !!