23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

ಬೆಳ್ತಂಗಡಿ: ಕಲ್ಮಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು, ಜಿಲ್ಲಾ ಮುಖ್ಯ ರಸ್ತೆಯ ಕಿ.ಮೀ 1.10 ರಲ್ಲಿರುವ ಅಂಬಡಬೆಟ್ಟು ಸೇತುವೆಯು ಹಳೆಯದಾಗಿದ್ದು ಘನ ವಾಹನಗಳ ಸಂಚಾರವನ್ನು ಅನಾನುಕೂಲವಾಗಿದ್ದು ತಾತ್ಕಾಲಿಕವಾಗಿ ನಿಷೇಧಿಸಲಾಗಿದ್ದು ಬದಲಿ ರಸ್ತೆಯನ್ನು ಅನುಸರಿಸುವಂತೆ ತಿಳಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು, ಜಿಲ್ಲಾ ಮುಖ್ಯ ರಸ್ತೆಯ ಕಿ.ಮೀ 1.10 ರಲ್ಲಿರುವ ಅಂಬಡಬೆಟ್ಟು ಸೇತುವೆಯು ಸುಮಾರು 40 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದು, ಕೆ.ಎಸ್.ಆರ್.ಟಿ.ಸಿ ಬಸ್, ಶಾಲಾ ವಾಹನಗಳು ಹಾಗೂ ಇತರೆ ವಾಹನಗಳು ಸಂಚರಿಸುವ (ಉಜಿರೆಯಿಂದ ಇಂದಬೆಟ್ಟು ಕಡೆಗೆ) ಪ್ರಮುಖ ಸಂಪರ್ಕ ಹೊಂದಿರುವ ಸೇತುವೆಯಾಗಿರುತ್ತದೆ. ಸೇತುವೆಯು ಹಳೆಯದಾಗಿದ್ದು ಶಿಥಿಲಾವಸ್ಥೆಯಲ್ಲಿರುವುದರಿಂದ, ಸಾರ್ವಜನಿಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ, ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ.

ಘನ ವಾಹನಗಳು ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಈ ಕೆಳಗಿನಂತೆ ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸಬಹುದಾಗಿದೆ:

1) ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ದ್ವಾರದಿಂದ – ಸುರ್ಯ ದೇವಸ್ಥಾನ ಮಾರ್ಗವಾಗಿ – ಕೇಳ್ತಾಜೆ ಮುಖಾಂತರ ಸಂಚರಿಸುವುದು. 2) ಬೆಳ್ತಂಗಡಿ-ಕಿಲ್ಲೂರು-ಕಾಜೂರು ರಸ್ತೆಯ ಇಂದಬೆಟ್ಟು ಗ್ರಾಮದಿಂದ ನೇತ್ರಾವತಿ ಎಸ್.ಟಿ.ಕಾಲೋನಿ ಮಾರ್ಗವಾಗಿ ಬೆಳ್ಳೂರು ಕ್ರಾಸ್ ರಸ್ತೆಯಾಗಿ – ರಾಜ್ಯ ಹೆದ್ದಾರಿ-276 ರಸ್ತೆಯಾದ ಸುಳ್ಯ ಪೈಚಾರು ಬೆಳ್ಳಾರೆ ಸವಣೂರು ಕುದ್ಮಾರು ಅಲಂಕಾರು ಸುರುಳಿ ಮಾದೇರಿ ಪಟ್ರಮೆ ಧರ್ಮಸ್ಥಳ ಮುಂಡಾಜೆ ದಿಡುಪೆ ರಸ್ತೆಯನ್ನು ಸಂಪರ್ಕಿಸುವುದು.

ಈ ಬಗ್ಗೆ ಕಾರ್ಯನಿರ್ವಾಹಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಮಂಗಳೂರು ವಿಭಾಗ, ಮಂಗಳೂರು ಇವರು ಸಲ್ಲಿಸಿರುವ ಪ್ರಸ್ತಾವನೆಯನ್ನು ಅವಲೋಕಿಸಿ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ ನೀಡಿದ್ದಾರೆ.

Related posts

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ.96.07 ಫಲಿತಾಂಶ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya
error: Content is protected !!