27.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ ಮೆಸ್ಕಾಂ ಇಲಾಖೆಯ ಪರಿಹಾರವಾಗಿ ರೂ.5 ಲಕ್ಷದ ಚೆಕ್ ನ್ನು ಶಾಸಕ ಹರೀಶ್ ಪೂಂಜ ಅವರ ಮುಖಾಂತರ ಕುಟುಂಬಸ್ಥರಿಗೆ ಶ್ರಮಿಕ ಕಾರ್ಯಾಲಯದಲ್ಲಿ ಜು.1 ರಂದು ವಿತರಿಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜ ಮಾತನಾಡಿ ಮೆಸ್ಕಾಂ ಇಲಾಖೆಯ ನಿರ್ಲಕ್ಷದಿಂದ ಯುವತಿ ಸಾವನ್ನಪ್ಪಿದ್ದರಿಂದ ಇಲಾಖೆಯಿಂದ 5 ಲಕ್ಷ ಪರಿಹಾರ ವನ್ನು ನೀಡಲಾಯಿತು. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಪರಿಹಾರ ದೊರಕಿಸುವಂತೆ ಇಲಾಖೆಗಳಿಗೆ ಹಾಗೂ ಸಚಿವರಿಗೆ ಮನವಿಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು..

ಈ ಸಂದರ್ಭದಲ್ಲಿ ಬೆಳ್ತಂಗಡಿ ಉಪವಿಭಾಗದ ಸ‍.ಕಾ. ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ರಾಗ್ಸ್, ಶಿಬಾಜೆ ಗ್ರಾ.ಪಂ. ಉಪಾಧ್ಯಕ್ಷ ದಿನಕರ ಕುರುಪ್, ಮಾಜಿ ಅಧ್ಯಕ್ಷ ರತೀಶ್ ಗೌಡ ಹಾಗೂ ಮೃತ ಯುವತಿಯ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ