July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಧರ್ಮಾಧಿಕಾರಿ ಸೂರ್ಯನು ಅತ್ಯಂತ ಶಕ್ತಿಶಾಲಿ, ಸೂರ್ಯನ ಬೆಳಕು ಅತ್ಯಂತ ದೊಡ್ಡ ಶಕ್ತಿಯ ಮೂಲವಾಗಿದೆ. ಕ್ಷೇತ್ರದ ಅನ್ನಛತ್ರಕ್ಕೆ ಸೌರಶಕ್ತಿಯ ಬೆಳಕು ನೀಡುವುದರಲ್ಲಿ ಸೆಲ್ಕೋ ಕಂಪನಿಯವರು ಸೋಲಾರ್ ಪ್ಯಾನೆಲ್ ಅಳವಡಿಸಿ ಸಹಕರಿಸಿದ್ದಾರೆ. ಅವರ ಸೇವೆಗೆ ನಾವು ಅಭಾರಿಯಾಗಿದ್ದೇವೆ ಎಂದರು.

ಸೆಲ್ಕೋ ಸಂಸ್ಥೆಯ ಸಿಇಓ ಮೋಹನ್ ಭಾಸ್ಕರ್ ಹೆಗ್ಡೆ ಮಾತನಾಡಿ ರಾಷ್ಟ್ರೀಯ ಬಹುಮುಖ್ಯವಾದ ಶ್ರದ್ದಾ ಕೇಂದ್ರ ಧರ್ಮಸ್ಥಳಕ್ಕೆ ದಿನನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಅನ್ನಪ್ರಸಾದ ಸ್ವೀಕಾರ ಮಾಡುತ್ತಾರೆ. ಜನರಿಗೆ ಇದರ ಪ್ರಯೋಜನವನ್ನು ತಿಳಿಯಪಡಿಸುವ ಸುದುದ್ದೇಶದಿಂದ ಇಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಸಿದ್ದೇವೆ ಎಂದರು.

ವೇದಿಕೆಯಲ್ಲಿ ಮಾತೃಶ್ರೀ ಹೇಮಾವತಿ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್,ಸುಪ್ರಿಯಾ ಹರ್ಷೆಂದ್ರ ಕುಮಾರ್ ಉಪಸ್ಥಿತರಿದ್ದರು. ಡಾ‌.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರೂ ಶೆಟ್ಟಿ ಹಾಗೂ ಶ್ರೀ ಕ್ಷೇತ್ರದ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು, ಸೆಲ್ಕೋ ಸಂಸ್ಥೆಯ ಬೆಳ್ತಂಗಡಿ ವ್ಯವಸ್ಥಾಪಕ ನವೀನ್ ವಂದಿಸಿದರು.

Related posts

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಭಟ್ಕಳ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya
error: Content is protected !!