23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಧರ್ಮಾಧಿಕಾರಿ ಸೂರ್ಯನು ಅತ್ಯಂತ ಶಕ್ತಿಶಾಲಿ, ಸೂರ್ಯನ ಬೆಳಕು ಅತ್ಯಂತ ದೊಡ್ಡ ಶಕ್ತಿಯ ಮೂಲವಾಗಿದೆ. ಕ್ಷೇತ್ರದ ಅನ್ನಛತ್ರಕ್ಕೆ ಸೌರಶಕ್ತಿಯ ಬೆಳಕು ನೀಡುವುದರಲ್ಲಿ ಸೆಲ್ಕೋ ಕಂಪನಿಯವರು ಸೋಲಾರ್ ಪ್ಯಾನೆಲ್ ಅಳವಡಿಸಿ ಸಹಕರಿಸಿದ್ದಾರೆ. ಅವರ ಸೇವೆಗೆ ನಾವು ಅಭಾರಿಯಾಗಿದ್ದೇವೆ ಎಂದರು.

ಸೆಲ್ಕೋ ಸಂಸ್ಥೆಯ ಸಿಇಓ ಮೋಹನ್ ಭಾಸ್ಕರ್ ಹೆಗ್ಡೆ ಮಾತನಾಡಿ ರಾಷ್ಟ್ರೀಯ ಬಹುಮುಖ್ಯವಾದ ಶ್ರದ್ದಾ ಕೇಂದ್ರ ಧರ್ಮಸ್ಥಳಕ್ಕೆ ದಿನನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಅನ್ನಪ್ರಸಾದ ಸ್ವೀಕಾರ ಮಾಡುತ್ತಾರೆ. ಜನರಿಗೆ ಇದರ ಪ್ರಯೋಜನವನ್ನು ತಿಳಿಯಪಡಿಸುವ ಸುದುದ್ದೇಶದಿಂದ ಇಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಸಿದ್ದೇವೆ ಎಂದರು.

ವೇದಿಕೆಯಲ್ಲಿ ಮಾತೃಶ್ರೀ ಹೇಮಾವತಿ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್,ಸುಪ್ರಿಯಾ ಹರ್ಷೆಂದ್ರ ಕುಮಾರ್ ಉಪಸ್ಥಿತರಿದ್ದರು. ಡಾ‌.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರೂ ಶೆಟ್ಟಿ ಹಾಗೂ ಶ್ರೀ ಕ್ಷೇತ್ರದ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು, ಸೆಲ್ಕೋ ಸಂಸ್ಥೆಯ ಬೆಳ್ತಂಗಡಿ ವ್ಯವಸ್ಥಾಪಕ ನವೀನ್ ವಂದಿಸಿದರು.

Related posts

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವದೇಶಿ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!