September 6, 2026
ನಿಧನ

ಸಾಹಿತಿ ಪ್ರೊ ಎನ್ ಜಿ ಪಟವರ್ಧನ್ ವಿಧಿವಶ

ಉಜಿರೆ: ತಾಲೂಕಿನ ಹಿರಿಯ ಸಾಹಿತಿ ಪ್ರೋ| ಎನ್.ಜಿ ಪಟವರ್ಧನ್ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ೩೩ ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಎನ್.ಜಿ ಪಟವರ್ಧನ್ ಅವರು ಆನೇಕ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ತಾಲೂಕಿನ ಪ್ರಖ್ಯಾತ ಸಾಹಿತಿಗಳಲ್ಲಿ ಓರ್ವರಾಗಿದ್ದ ಅವರ ಆನೇಕ ಕವನ, ಹನಿಗವನ, ಕಥೆ, ಕಾದಂಬರಿ ಕೃತಿಗಳು ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷತೆಯನ್ನು ವಹಿಸಿ ಯಶಸ್ವಿಯಾಗಿ ನಿರ್ವಹಿಸಿದ್ದರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿರುವ ಎನ್.ಜಿ ಪಟವರ್ಧನ್ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

Related posts

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya

ಸಿಪಿಐಎಂ ಮುಖಂಡ, ಪಕ್ಷದ‌ ಹಿರಿಯ ನಾಯಕ ಯಲ್.ಮಂಜುನಾಥ್ ನಿಧನ

Suddi Udaya

ಪೆರಿಂಜೆ ತಿಮ್ಮೊಟ್ಟು ಕೃಷ್ಣಪ್ಪ ಪೂಜಾರಿ ನಿಧನ

Suddi Udaya
error: Content is protected !!