ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಹತ್ಯಡ್ಕ : ಕೆ.ವಿ.ಜಿ ಬ್ಯಾಂಕ್ ನಲ್ಲಿ ಸುಮಾರು ವರ್ಷಗಳಿಂದ ಮ್ಯಾನೇಜರ್ ಯಾಗಿದ್ದ ಪುಷ್ಪರಾಜ್ ಕೆ.ಸಿ ರವರು ನಿವೃತ್ತಿಗೊಂಡಿದ್ದು ಇವರಿಗೆ ಬಿಳ್ಕೋಡುಗೆ ಸಮಾರಂಭವು ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಜೂ.29 ರಂದು ನಡೆಯಿತು.

ಈ ವೇಳೆ ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ನಿವೃತ್ತ ಜೀವನಕ್ಕೆ ಶುಭಹಾರೈಸಿದರು.

ವೇದಿಕೆಯಲ್ಲಿ ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕರಾದ ಧರ್ಮರಾಜ ಗೌಡ, ಹತ್ಯಡ್ಕ ಸಹಕಾರಿ ಸಂಘದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್, ಅರಸಿನಮಕ್ಕಿ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಮ್ .ಎಸ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಶಾಖಾ ಪ್ರಬಂಧಕರಾದ ಸತ್ಯನಾರಾಯಣ ಉಪಸ್ಥಿತರಿದ್ದರು.

ಅಬ್ಬಾಸ್ ಅಸರ್ ಸ್ವಾಗತಿಸಿದರು. ಕೆ.ವಿ.ಜಿ ಬ್ಯಾಂಕ್ ಸಿಬ್ಬಂದಿ ವಂದನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Leave a Comment

error: Content is protected !!