23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

ಉಜಿರೆ: ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ಜೂ.30 ರಂದು ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು.

ನೀರಚಿಲುಮೆ ನಿನಾದದ ಶ್ರೀಮತಿ ಸೋನಿಯಾ ಯಶೋವರ್ಮ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ,
ಭತ್ತದಲ್ಲಿರುವ ಜೊಳ್ಳು ಮತ್ತು ಹೊಟ್ಟನ್ನು ಆರಿಸಿ ಭತ್ತವನ್ನು ತೆಗೆದಂತೆ, ವಿದ್ಯಾರ್ಥಿಗಳು ಒಳ್ಳೆಯ ಗುಣವನ್ನು ಅಳವಡಿಸಿ ಕೊಳ್ಳುವುದರೊಂದಿಗೆ ಶಿಕ್ಷಣ ಮತ್ತು ಶಿಕ್ಷಣೇತರ ಚಟುವಟಿಕೆಗೆ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕೆಂದು ಕರೆಯಿತ್ತರು.

ನಿಲಯಪಾಲಕರಾದ ಯತೀಶ್ .ಕೆ ಬಳಂಜರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಭತ್ತ ನಾಟಿಯ ವಿವಿಧ ಮಜಲುಗಳನ್ನು ವಿಸ್ತಾರವಾಗಿ ವಿವರಿಸಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ನಿತ್ಯದ ದಿನಚರಿಯಲ್ಲಿ ಕೃಷಿಗೆ ಆದ್ಯತೆ ನೀಡುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ವಸತಿ ನಿಲಯದ ಅಧ್ಯಾಪಕರಾದ ರವಿಚಂದ್ರ ಧನ್ಯವಾದ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಿಬ್ಬಂಧಿಗಳಾದ ಉದಯರಾಜ್, ದೀಪಕ್ .ಕೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಭತ್ತದ ಬೀಜಗಳನ್ನು ಹಾಕಿ ಅನುಭವ ಪಡೆದುಕೊಂಡರು.

Related posts

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya
error: Content is protected !!