25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

ಉಜಿರೆ: ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ಜೂ.30 ರಂದು ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು.

ನೀರಚಿಲುಮೆ ನಿನಾದದ ಶ್ರೀಮತಿ ಸೋನಿಯಾ ಯಶೋವರ್ಮ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ,
ಭತ್ತದಲ್ಲಿರುವ ಜೊಳ್ಳು ಮತ್ತು ಹೊಟ್ಟನ್ನು ಆರಿಸಿ ಭತ್ತವನ್ನು ತೆಗೆದಂತೆ, ವಿದ್ಯಾರ್ಥಿಗಳು ಒಳ್ಳೆಯ ಗುಣವನ್ನು ಅಳವಡಿಸಿ ಕೊಳ್ಳುವುದರೊಂದಿಗೆ ಶಿಕ್ಷಣ ಮತ್ತು ಶಿಕ್ಷಣೇತರ ಚಟುವಟಿಕೆಗೆ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕೆಂದು ಕರೆಯಿತ್ತರು.

ನಿಲಯಪಾಲಕರಾದ ಯತೀಶ್ .ಕೆ ಬಳಂಜರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಭತ್ತ ನಾಟಿಯ ವಿವಿಧ ಮಜಲುಗಳನ್ನು ವಿಸ್ತಾರವಾಗಿ ವಿವರಿಸಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ನಿತ್ಯದ ದಿನಚರಿಯಲ್ಲಿ ಕೃಷಿಗೆ ಆದ್ಯತೆ ನೀಡುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ವಸತಿ ನಿಲಯದ ಅಧ್ಯಾಪಕರಾದ ರವಿಚಂದ್ರ ಧನ್ಯವಾದ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಿಬ್ಬಂಧಿಗಳಾದ ಉದಯರಾಜ್, ದೀಪಕ್ .ಕೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಭತ್ತದ ಬೀಜಗಳನ್ನು ಹಾಕಿ ಅನುಭವ ಪಡೆದುಕೊಂಡರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya

ಭಾರತದ  ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್ ರವರನ್ನು  ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ  ಡಾ. ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya
error: Content is protected !!