April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ. ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ ನಡೆಯಿತು.

ರಾ. ಸೇ. ಯೋಜನೆಯ ಸಲಹಾ ಸಮಿತಿಯ ಸದಸ್ಯ ಹಾಗೂ ಹಿರಿಯ ವಿದ್ಯಾರ್ಥಿ ಸ್ವಯಂ ಸೇವಕ ಧನುಷ್ ಕೆ.ಪಿ ಅವರು ರಾ.ಸೇ.ಯೋಜನೆಯ ಕಾರ್ಯಗಳ ಮಾಹಿತಿಗಳ ಬಗ್ಗೆ ತರಬೇತಿ ನಡೆಸಿದರು. ಇವರೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾ.ಸೇ. ಯೋಜನೆಯ ಸ್ವಯಂ ಸೇವಕರಾದ ನಿಸರ್ಗ , ನಿಕ್ಷೇಪ್ ಹಾಗೂ ತ್ರಿಶೂಲ್ ಅವರು ವಿವಿಧ ವಿಷಯಗಳ ಬಗ್ಗೆ ಕಾರ್ಯಾಗಾರ ನಡೆಸಿದರು.

ಘಟಕದ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ಮಾತನಾಡಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು. ಘಟಕದ ನಾಯಕ ಆದಿತ್ಯ ಹಾಗೂ ನಾಯಕಿ ಪ್ರಾಪ್ತಿ ನೇತೃತ್ವ ವಹಿಸಿದ್ದರು.

Related posts

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya
error: Content is protected !!