30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

ಉಜಿರೆ: ಸುರಕ್ಷಾ ಮೆಡಿಕಲ್ಸ್ ನ‌ ಮಾಲೀಕರೂ, ಸೇವಾಭಾರತಿ ಕನ್ಯಾಡಿ ಇದರ ” ಆರೋಗ್ಯಂ” ವಿಭಾಗದ ಮುಖ್ಯಸ್ಥರೂ ಆಗಿರುವ ರೊ. ಶ್ರೀಧರ ಕೆವಿ ಅವರನ್ನು ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ 66 ನೇ ವಾರ್ಷಿಕ ಮಹಾ ಸಭೆಯಲ್ಲಿ ಸನ್ಮಾನಿಸಲಾಯಿತು.

ಶ್ರೀಧರ ಕೆ.ವಿ ಅವರು ತಾಲೂಕಿನ ಬೇರೆ ಬೇರೆ ಸಂಘ ಸಂಸ್ಥೆ ಗಳನ್ನು ಒಗ್ಗೂಡಿಸಿ ಈ ತನಕ 75 ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸದ್ದು ಮಾತ್ರವಲ್ಲದೆ ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವವರಿಗೆ ರಕ್ತದ ವ್ಯವಸ್ಥೆಯನ್ನೂ ಮಾಡುತ್ತಿದ್ದಾರೆ ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘವು ಅವರನ್ನು ಗುರುತಿಸಿ ಗೌರವಿಸಿದೆ.

ಈ ಸಭೆಯಲ್ಲಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಜಗನ್ನಾಥ್ ಶಿಂಧೆ, ಕಾರ್ಯದರ್ಶಿ ರಾಜೀವ್ ಸಿಂಘಲ್ , ಕರ್ನಾಟಕ ಔಷದ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಘುನಾಥ ರೆಡ್ಡಿ, ಗೌರವ ಕಾರ್ಯದರ್ಶಿ ಎ.ಕೆ ಜೀವನ್ , ಕರ್ನಾಟಕ ಸರಕಾರದ ಮುಖ್ಯ ಔಷಧ ನಿಯಂತ್ರಕರಾದ ಭಾಗೋಜಿ ಟಿ ಖಾನಾಪುರೆ, ಉಪ ಔಷಧ ನಿಯಂತ್ರಕರಾದ ಸುರೇಶ್ ಕೆಂಪಯ್ಯ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಸ್ಪರ್ಧಾತ್ಮಕ ಪರೀಕ್ಷೆ: ಕು. ಅಂಚಿತಾ ಡಿ. ಜೈನ್ ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

Suddi Udaya
error: Content is protected !!