23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

ಉಜಿರೆ: ಸುರಕ್ಷಾ ಮೆಡಿಕಲ್ಸ್ ನ‌ ಮಾಲೀಕರೂ, ಸೇವಾಭಾರತಿ ಕನ್ಯಾಡಿ ಇದರ ” ಆರೋಗ್ಯಂ” ವಿಭಾಗದ ಮುಖ್ಯಸ್ಥರೂ ಆಗಿರುವ ರೊ. ಶ್ರೀಧರ ಕೆವಿ ಅವರನ್ನು ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ 66 ನೇ ವಾರ್ಷಿಕ ಮಹಾ ಸಭೆಯಲ್ಲಿ ಸನ್ಮಾನಿಸಲಾಯಿತು.

ಶ್ರೀಧರ ಕೆ.ವಿ ಅವರು ತಾಲೂಕಿನ ಬೇರೆ ಬೇರೆ ಸಂಘ ಸಂಸ್ಥೆ ಗಳನ್ನು ಒಗ್ಗೂಡಿಸಿ ಈ ತನಕ 75 ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸದ್ದು ಮಾತ್ರವಲ್ಲದೆ ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವವರಿಗೆ ರಕ್ತದ ವ್ಯವಸ್ಥೆಯನ್ನೂ ಮಾಡುತ್ತಿದ್ದಾರೆ ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘವು ಅವರನ್ನು ಗುರುತಿಸಿ ಗೌರವಿಸಿದೆ.

ಈ ಸಭೆಯಲ್ಲಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಜಗನ್ನಾಥ್ ಶಿಂಧೆ, ಕಾರ್ಯದರ್ಶಿ ರಾಜೀವ್ ಸಿಂಘಲ್ , ಕರ್ನಾಟಕ ಔಷದ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಘುನಾಥ ರೆಡ್ಡಿ, ಗೌರವ ಕಾರ್ಯದರ್ಶಿ ಎ.ಕೆ ಜೀವನ್ , ಕರ್ನಾಟಕ ಸರಕಾರದ ಮುಖ್ಯ ಔಷಧ ನಿಯಂತ್ರಕರಾದ ಭಾಗೋಜಿ ಟಿ ಖಾನಾಪುರೆ, ಉಪ ಔಷಧ ನಿಯಂತ್ರಕರಾದ ಸುರೇಶ್ ಕೆಂಪಯ್ಯ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!