22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

ಉಜಿರೆ: ಸುರಕ್ಷಾ ಮೆಡಿಕಲ್ಸ್ ನ‌ ಮಾಲೀಕರೂ, ಸೇವಾಭಾರತಿ ಕನ್ಯಾಡಿ ಇದರ ” ಆರೋಗ್ಯಂ” ವಿಭಾಗದ ಮುಖ್ಯಸ್ಥರೂ ಆಗಿರುವ ರೊ. ಶ್ರೀಧರ ಕೆವಿ ಅವರನ್ನು ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ 66 ನೇ ವಾರ್ಷಿಕ ಮಹಾ ಸಭೆಯಲ್ಲಿ ಸನ್ಮಾನಿಸಲಾಯಿತು.

ಶ್ರೀಧರ ಕೆ.ವಿ ಅವರು ತಾಲೂಕಿನ ಬೇರೆ ಬೇರೆ ಸಂಘ ಸಂಸ್ಥೆ ಗಳನ್ನು ಒಗ್ಗೂಡಿಸಿ ಈ ತನಕ 75 ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸದ್ದು ಮಾತ್ರವಲ್ಲದೆ ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವವರಿಗೆ ರಕ್ತದ ವ್ಯವಸ್ಥೆಯನ್ನೂ ಮಾಡುತ್ತಿದ್ದಾರೆ ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘವು ಅವರನ್ನು ಗುರುತಿಸಿ ಗೌರವಿಸಿದೆ.

ಈ ಸಭೆಯಲ್ಲಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಜಗನ್ನಾಥ್ ಶಿಂಧೆ, ಕಾರ್ಯದರ್ಶಿ ರಾಜೀವ್ ಸಿಂಘಲ್ , ಕರ್ನಾಟಕ ಔಷದ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಘುನಾಥ ರೆಡ್ಡಿ, ಗೌರವ ಕಾರ್ಯದರ್ಶಿ ಎ.ಕೆ ಜೀವನ್ , ಕರ್ನಾಟಕ ಸರಕಾರದ ಮುಖ್ಯ ಔಷಧ ನಿಯಂತ್ರಕರಾದ ಭಾಗೋಜಿ ಟಿ ಖಾನಾಪುರೆ, ಉಪ ಔಷಧ ನಿಯಂತ್ರಕರಾದ ಸುರೇಶ್ ಕೆಂಪಯ್ಯ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya
error: Content is protected !!