29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಜು.1ರಂದು ಎಸ್.ಡಿ.ಎಂ ಸಭಾಭವನದಲ್ಲಿ ನಡೆಯಿತು.


ಕಾಯ೯ಕ್ರಮದಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್, ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಡಿ.ಸಿ ರಾಜೇಶ್ ಶೆಟ್ಟಿ, ಪುತ್ತೂರು ವಿಭಾಗದ ಡಿ.ಸಿ ಅಮಲಿಂಗಯ್ಯ ವಸು ಪೂಜಾರಿ, ಕೆಎಸ್ಸಾರ್ಟಿಸಿ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಧಮ೯ಸ್ಥಳದಿಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಹೋಗುವ ಬಸ್ ಗಳು, ಶಾಲಾ ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್ ಗಳ ಓಡಾಟ ಬಗ್ಗೆ ನಾಗರಿಕರು ಅಭಿಪ್ರಾಯಪಟ್ಟರು. ಗ್ರಾಮೀಣ ಪ್ರದೇಶಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಬರಬೇಕು, ಶನಿವಾರ ಗ್ರಾಮೀಣ ಪ್ರದೇಶಗಳಿಗೆ ಶಾಲಾ ಮಕ್ಕಳ ಅನುಕೂಲವಾಗುವ ರೀತಿಯಲ್ಲಿ ಬಸ್ ಬರಬೇಕು ಎಂದು ಶಾಲಾ ವಿದ್ಯಾರ್ಥಿಗಳು ಆಗ್ರಹಿಸಿದರು.

ಬೆಳ್ತಂಗಡಿ – ವೇಣೂರು ಸರಕಾರಿ ಬಸ್, ಬೆಳ್ತಂಗಡಿ – ಪೆರಾಡಿ, ಕಾಶಿಪಟ್ಣ ಬಸ್, ಪಟ್ರಮೆ, ದಿಡುಪೆ, ನೆರಿಯ, ಕಾಯ೯ತ್ತಡ್ಕ ಮೊದಲಾದ ಪ್ರದೇಶಗಳಲ್ಲಿ ಬಸ್ಸಿನ ಬೇಡಿಕೆ ವ್ಯಕ್ತವಾಯಿತು.
ಸಭೆಯಲ್ಲಿ ವಾಣಿ ಕಾಲೇಜು ಪ್ರಾಂಶುಪಾಲ ಯದುಪತಿ ಗೌಡ, ಸುಧಾಕರ ಅರಿಸಿನ ಮಿಕ್ಕಿ, ರತ್ನಾಕರ್ ಬುಣ್ಣನ್, ಭಾರತಿ ಶೆಟ್ಟಿ ಕುವೆಟ್ಟು, ಮಾಧವ ಶಿಲಾ೯ಲು, ದಿನೇಶ್ ಖಂಡಿಗಾ, ಆಶಾ ಸಲ್ದಾನಾ, ದೀಕ್ಷಿತ್ ದಿಡುಪೆ, ಶಿಶಿಲ ಗ್ರಾ.ಪಂ ಅಧ್ಯಕ್ಷ, ಮೊದಲಾದವರು ಸೇರಿದಂತೆ ಹಲವು ಮಂದಿ ಬೇಡಿಕೆ ಸಲ್ಲಿಸಿದರು.

Related posts

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya
error: Content is protected !!