September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಜು.1ರಂದು ಎಸ್.ಡಿ.ಎಂ ಸಭಾಭವನದಲ್ಲಿ ನಡೆಯಿತು.


ಕಾಯ೯ಕ್ರಮದಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್, ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಡಿ.ಸಿ ರಾಜೇಶ್ ಶೆಟ್ಟಿ, ಪುತ್ತೂರು ವಿಭಾಗದ ಡಿ.ಸಿ ಅಮಲಿಂಗಯ್ಯ ವಸು ಪೂಜಾರಿ, ಕೆಎಸ್ಸಾರ್ಟಿಸಿ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಧಮ೯ಸ್ಥಳದಿಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಹೋಗುವ ಬಸ್ ಗಳು, ಶಾಲಾ ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್ ಗಳ ಓಡಾಟ ಬಗ್ಗೆ ನಾಗರಿಕರು ಅಭಿಪ್ರಾಯಪಟ್ಟರು. ಗ್ರಾಮೀಣ ಪ್ರದೇಶಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಬರಬೇಕು, ಶನಿವಾರ ಗ್ರಾಮೀಣ ಪ್ರದೇಶಗಳಿಗೆ ಶಾಲಾ ಮಕ್ಕಳ ಅನುಕೂಲವಾಗುವ ರೀತಿಯಲ್ಲಿ ಬಸ್ ಬರಬೇಕು ಎಂದು ಶಾಲಾ ವಿದ್ಯಾರ್ಥಿಗಳು ಆಗ್ರಹಿಸಿದರು.

ಬೆಳ್ತಂಗಡಿ – ವೇಣೂರು ಸರಕಾರಿ ಬಸ್, ಬೆಳ್ತಂಗಡಿ – ಪೆರಾಡಿ, ಕಾಶಿಪಟ್ಣ ಬಸ್, ಪಟ್ರಮೆ, ದಿಡುಪೆ, ನೆರಿಯ, ಕಾಯ೯ತ್ತಡ್ಕ ಮೊದಲಾದ ಪ್ರದೇಶಗಳಲ್ಲಿ ಬಸ್ಸಿನ ಬೇಡಿಕೆ ವ್ಯಕ್ತವಾಯಿತು.
ಸಭೆಯಲ್ಲಿ ವಾಣಿ ಕಾಲೇಜು ಪ್ರಾಂಶುಪಾಲ ಯದುಪತಿ ಗೌಡ, ಸುಧಾಕರ ಅರಿಸಿನ ಮಿಕ್ಕಿ, ರತ್ನಾಕರ್ ಬುಣ್ಣನ್, ಭಾರತಿ ಶೆಟ್ಟಿ ಕುವೆಟ್ಟು, ಮಾಧವ ಶಿಲಾ೯ಲು, ದಿನೇಶ್ ಖಂಡಿಗಾ, ಆಶಾ ಸಲ್ದಾನಾ, ದೀಕ್ಷಿತ್ ದಿಡುಪೆ, ಶಿಶಿಲ ಗ್ರಾ.ಪಂ ಅಧ್ಯಕ್ಷ, ಮೊದಲಾದವರು ಸೇರಿದಂತೆ ಹಲವು ಮಂದಿ ಬೇಡಿಕೆ ಸಲ್ಲಿಸಿದರು.

Related posts

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ ತಡೆ

Suddi Udaya

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya
error: Content is protected !!