September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

ಬೆಳ್ತಂಗಡಿ: ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯಲ್ಲಿರುವ ಕೈಕಂಬ ಸೇತುವೆ ಹಲವಾರು ವರ್ಷಗಳಿಂದ ಶಿಥಿಲಗೊಂಡಿದ್ದು , ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೂ ಎಚ್ಚೆತ್ತ ನಾವೂರು ಗ್ರಾಮ ಪಂಚಾಯತ್ ಇದೀಗ ಈ ಸೇತುವೆಯಲ್ಲಿ ಘನ ವಾಹನ ಸಂಚಾರವನ್ನು ನಿಷೇಧಿಸಿ ಬೋರ್ಡ್ ಅವಳವಡಿಸಿದೆ.

ಈ ಸೇತುವೆಯ ಎರಡೂ ಕಡೆಯ ತಡೆಗೋಡೆಗಳು 2019 ರ ಭೀಕರ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೊಚ್ಚಿ ಹೋಗಿತ್ತು. ಸೇತುವೆಯ ಅಡಿ ಭಾಗದಲ್ಲಿ ಕಾಂಕ್ರೀಟ್ ಕಿತ್ತು ಹೋಗಿ ಕಬ್ಬಿಣದ ಸರಳು ಕಾಣುತ್ತಿದೆ. ಇಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಹಲವಾರು ಬಾರಿ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ಕಳೆದ ಚುನಾವಣೆಯ ಸಂದರ್ಭದಲ್ಲಿ ಈ ಪ್ರದೇಶದ ನಾಗರಿಕರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದರು. ಆಗ ಆ ಪ್ರದೇಶಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ , ನಾವೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲನೆ ನಡೆಸಿದ್ದರು.

ಇದೀಗ ಜನರ ಆಕ್ರೋಶವನ್ನು ಶಮನಗೊಳಿಸಲು ಸೇತುವೆ ಶಿಥಿಲವಾಗಿದ್ದು ಘನ ವಾಹನ ಸಂಚಾರವನ್ನು ನಿಷೇಧಿಸಿದೆ. ಜೊತೆಗೆ ಸೇತುವೆಯ ಎರಡೂ ಬದಿಗಳಲ್ಲಿ ದುರ್ಬಲಗೊಂಡ ಕಾರಣ ಶಾಲಾ ಮಕ್ಕಳು , ಸಾರ್ವಜನಿಕರು ಸಂಚರಿಸುವಾಗ ಎಚ್ಚರಿಕೆ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.

Related posts

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!