September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

ಬೆಳ್ತಂಗಡಿ: ನಿರಂತರ ಪರಿಶ್ರಮದಿಂದ ಉತ್ತಮ ಫಲಿತಾಂಶವನ್ನು ಪಡೆದು ಜೀವನದಲ್ಲಿ ಯಶಸ್ಸನ್ನು ಗಳಿಸಬಹುದು ಎಂದು ಡಾI ಜೇಸನ್ ಅವಿತ್ ಪಿರೇರಾ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ನಡೆದ ಪ್ರೇರಣಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಲು ಶಿಕ್ಷಕರ ಸಲಹೆ ಸೂಚನೆಗಳೊಂದಿಗೆ ಹೆಚ್ಚಿನ ಪರಿಶ್ರಮದ ಅಗತ್ಯವಿದೆ. ವಿದ್ಯಾರ್ಥಿ ಜೀವನದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತೊಡಗಿ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನದಲ್ಲಿ ತೊಡಗಬೇಕು. ಆಗ ಗುರಿಯನ್ನು ತಲುಪಲು ಸಾಧ್ಯವಾಗುತ್ತದೆ ಎಂದರು.


ಕಾಲೇಜಿನ ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆಯನ್ನು ವಹಿಸಿದ್ದರು. ಜೆಇಇ, ನೀಟ್ ಪರೀಕ್ಷಾ ತರಬೇತುದಾರ ಡಾ ಶುತಕೀರ್ತಿ ಜೈನ್ ಉಪಸಿತರಿದ್ದರು.
ವಿಜ್ಞಾನ ಸಂಘದ ಸಂಯೋಜಕರಾದ ಶ್ರೀಮತಿ ಸೌಜನ್ಯ ಸ್ವಾಗತಿಸಿದರು. ಉಪನ್ಯಾಸಕಿ ಕು ರಾಜಶ್ರೀ ವಂದಿಸಿದರು. ಆಕಾಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

Suddi Udaya

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!