ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ ಮೆಸ್ಕಾಂ ಇಲಾಖೆಯ ಪರಿಹಾರವಾಗಿ ರೂ.5 ಲಕ್ಷದ ಚೆಕ್ ನ್ನು ಶಾಸಕ ಹರೀಶ್ ಪೂಂಜ ಅವರ ಮುಖಾಂತರ ಕುಟುಂಬಸ್ಥರಿಗೆ ಶ್ರಮಿಕ ಕಾರ್ಯಾಲಯದಲ್ಲಿ ಜು.1 ರಂದು ವಿತರಿಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜ ಮಾತನಾಡಿ ಮೆಸ್ಕಾಂ ಇಲಾಖೆಯ ನಿರ್ಲಕ್ಷದಿಂದ ಯುವತಿ ಸಾವನ್ನಪ್ಪಿದ್ದರಿಂದ ಇಲಾಖೆಯಿಂದ 5 ಲಕ್ಷ ಪರಿಹಾರ ವನ್ನು ನೀಡಲಾಯಿತು. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಪರಿಹಾರ ದೊರಕಿಸುವಂತೆ ಇಲಾಖೆಗಳಿಗೆ ಹಾಗೂ ಸಚಿವರಿಗೆ ಮನವಿಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು..

ಈ ಸಂದರ್ಭದಲ್ಲಿ ಬೆಳ್ತಂಗಡಿ ಉಪವಿಭಾಗದ ಸ‍.ಕಾ. ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ರಾಗ್ಸ್, ಶಿಬಾಜೆ ಗ್ರಾ.ಪಂ. ಉಪಾಧ್ಯಕ್ಷ ದಿನಕರ ಕುರುಪ್, ಮಾಜಿ ಅಧ್ಯಕ್ಷ ರತೀಶ್ ಗೌಡ ಹಾಗೂ ಮೃತ ಯುವತಿಯ ಕುಟುಂಬಸ್ಥರು ಉಪಸ್ಥಿತರಿದ್ದರು.

Leave a Comment

error: Content is protected !!