July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಧರ್ಮಾಧಿಕಾರಿ ಸೂರ್ಯನು ಅತ್ಯಂತ ಶಕ್ತಿಶಾಲಿ, ಸೂರ್ಯನ ಬೆಳಕು ಅತ್ಯಂತ ದೊಡ್ಡ ಶಕ್ತಿಯ ಮೂಲವಾಗಿದೆ. ಕ್ಷೇತ್ರದ ಅನ್ನಛತ್ರಕ್ಕೆ ಸೌರಶಕ್ತಿಯ ಬೆಳಕು ನೀಡುವುದರಲ್ಲಿ ಸೆಲ್ಕೋ ಕಂಪನಿಯವರು ಸೋಲಾರ್ ಪ್ಯಾನೆಲ್ ಅಳವಡಿಸಿ ಸಹಕರಿಸಿದ್ದಾರೆ. ಅವರ ಸೇವೆಗೆ ನಾವು ಅಭಾರಿಯಾಗಿದ್ದೇವೆ ಎಂದರು.

ಸೆಲ್ಕೋ ಸಂಸ್ಥೆಯ ಸಿಇಓ ಮೋಹನ್ ಭಾಸ್ಕರ್ ಹೆಗ್ಡೆ ಮಾತನಾಡಿ ರಾಷ್ಟ್ರೀಯ ಬಹುಮುಖ್ಯವಾದ ಶ್ರದ್ದಾ ಕೇಂದ್ರ ಧರ್ಮಸ್ಥಳಕ್ಕೆ ದಿನನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಅನ್ನಪ್ರಸಾದ ಸ್ವೀಕಾರ ಮಾಡುತ್ತಾರೆ. ಜನರಿಗೆ ಇದರ ಪ್ರಯೋಜನವನ್ನು ತಿಳಿಯಪಡಿಸುವ ಸುದುದ್ದೇಶದಿಂದ ಇಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಸಿದ್ದೇವೆ ಎಂದರು.

ವೇದಿಕೆಯಲ್ಲಿ ಮಾತೃಶ್ರೀ ಹೇಮಾವತಿ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್,ಸುಪ್ರಿಯಾ ಹರ್ಷೆಂದ್ರ ಕುಮಾರ್ ಉಪಸ್ಥಿತರಿದ್ದರು. ಡಾ‌.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರೂ ಶೆಟ್ಟಿ ಹಾಗೂ ಶ್ರೀ ಕ್ಷೇತ್ರದ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು, ಸೆಲ್ಕೋ ಸಂಸ್ಥೆಯ ಬೆಳ್ತಂಗಡಿ ವ್ಯವಸ್ಥಾಪಕ ನವೀನ್ ವಂದಿಸಿದರು.

Related posts

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಧರ್ಮಸ್ಥಳ: ಯುಗಾದಿ ಬಳಗದ ಸ್ನೇಹ ಪರ್ವ-2 ಕಾರ್ಯಕ್ರಮ

Suddi Udaya

ಉಜಿರೆ: ಹರೀಶ್ ಭಂಡಾರಿ ನಿಧನ

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!