23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಧರ್ಮಾಧಿಕಾರಿ ಸೂರ್ಯನು ಅತ್ಯಂತ ಶಕ್ತಿಶಾಲಿ, ಸೂರ್ಯನ ಬೆಳಕು ಅತ್ಯಂತ ದೊಡ್ಡ ಶಕ್ತಿಯ ಮೂಲವಾಗಿದೆ. ಕ್ಷೇತ್ರದ ಅನ್ನಛತ್ರಕ್ಕೆ ಸೌರಶಕ್ತಿಯ ಬೆಳಕು ನೀಡುವುದರಲ್ಲಿ ಸೆಲ್ಕೋ ಕಂಪನಿಯವರು ಸೋಲಾರ್ ಪ್ಯಾನೆಲ್ ಅಳವಡಿಸಿ ಸಹಕರಿಸಿದ್ದಾರೆ. ಅವರ ಸೇವೆಗೆ ನಾವು ಅಭಾರಿಯಾಗಿದ್ದೇವೆ ಎಂದರು.

ಸೆಲ್ಕೋ ಸಂಸ್ಥೆಯ ಸಿಇಓ ಮೋಹನ್ ಭಾಸ್ಕರ್ ಹೆಗ್ಡೆ ಮಾತನಾಡಿ ರಾಷ್ಟ್ರೀಯ ಬಹುಮುಖ್ಯವಾದ ಶ್ರದ್ದಾ ಕೇಂದ್ರ ಧರ್ಮಸ್ಥಳಕ್ಕೆ ದಿನನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಅನ್ನಪ್ರಸಾದ ಸ್ವೀಕಾರ ಮಾಡುತ್ತಾರೆ. ಜನರಿಗೆ ಇದರ ಪ್ರಯೋಜನವನ್ನು ತಿಳಿಯಪಡಿಸುವ ಸುದುದ್ದೇಶದಿಂದ ಇಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಸಿದ್ದೇವೆ ಎಂದರು.

ವೇದಿಕೆಯಲ್ಲಿ ಮಾತೃಶ್ರೀ ಹೇಮಾವತಿ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್,ಸುಪ್ರಿಯಾ ಹರ್ಷೆಂದ್ರ ಕುಮಾರ್ ಉಪಸ್ಥಿತರಿದ್ದರು. ಡಾ‌.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರೂ ಶೆಟ್ಟಿ ಹಾಗೂ ಶ್ರೀ ಕ್ಷೇತ್ರದ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು, ಸೆಲ್ಕೋ ಸಂಸ್ಥೆಯ ಬೆಳ್ತಂಗಡಿ ವ್ಯವಸ್ಥಾಪಕ ನವೀನ್ ವಂದಿಸಿದರು.

Related posts

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಮದಕುಡೆ ಕುಟುಂಬಸ್ಥರಿಂದ ಪೆರಿಂಜೆ ಸ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

Suddi Udaya
error: Content is protected !!