April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

ಉಜಿರೆ: ಸುರಕ್ಷಾ ಮೆಡಿಕಲ್ಸ್ ನ‌ ಮಾಲೀಕರೂ, ಸೇವಾಭಾರತಿ ಕನ್ಯಾಡಿ ಇದರ ” ಆರೋಗ್ಯಂ” ವಿಭಾಗದ ಮುಖ್ಯಸ್ಥರೂ ಆಗಿರುವ ರೊ. ಶ್ರೀಧರ ಕೆವಿ ಅವರನ್ನು ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ 66 ನೇ ವಾರ್ಷಿಕ ಮಹಾ ಸಭೆಯಲ್ಲಿ ಸನ್ಮಾನಿಸಲಾಯಿತು.

ಶ್ರೀಧರ ಕೆ.ವಿ ಅವರು ತಾಲೂಕಿನ ಬೇರೆ ಬೇರೆ ಸಂಘ ಸಂಸ್ಥೆ ಗಳನ್ನು ಒಗ್ಗೂಡಿಸಿ ಈ ತನಕ 75 ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸದ್ದು ಮಾತ್ರವಲ್ಲದೆ ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವವರಿಗೆ ರಕ್ತದ ವ್ಯವಸ್ಥೆಯನ್ನೂ ಮಾಡುತ್ತಿದ್ದಾರೆ ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘವು ಅವರನ್ನು ಗುರುತಿಸಿ ಗೌರವಿಸಿದೆ.

ಈ ಸಭೆಯಲ್ಲಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಜಗನ್ನಾಥ್ ಶಿಂಧೆ, ಕಾರ್ಯದರ್ಶಿ ರಾಜೀವ್ ಸಿಂಘಲ್ , ಕರ್ನಾಟಕ ಔಷದ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಘುನಾಥ ರೆಡ್ಡಿ, ಗೌರವ ಕಾರ್ಯದರ್ಶಿ ಎ.ಕೆ ಜೀವನ್ , ಕರ್ನಾಟಕ ಸರಕಾರದ ಮುಖ್ಯ ಔಷಧ ನಿಯಂತ್ರಕರಾದ ಭಾಗೋಜಿ ಟಿ ಖಾನಾಪುರೆ, ಉಪ ಔಷಧ ನಿಯಂತ್ರಕರಾದ ಸುರೇಶ್ ಕೆಂಪಯ್ಯ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Related posts

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!